Advertisement

ಬಿ.ಎಸ್. ಯಡಿಯೂರಪ್ಪ ಹೋರಾಟದ ಹಿನ್ನೆಲೆಯಿಂದ ಬಂದವರು: ಬಿ.ವೈ. ವಿಜಯೇಂದ್ರ

07:28 PM Sep 30, 2019 | Team Udayavani |

ದಾವಣಗೆರೆ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೋರಾಟದ ಹಿನ್ನೆಲೆಯಿಂದ ಬಂದವರು ಆ ಹಿನ್ನೆಲೆಯಲ್ಲಿ ನನ್ನದು ತಂತಿ ಮೇಲೆ ನಡಿಗೆ ಎಂದು ಹೇಳಿದ್ದಾರೆಯೆ ಹೊರತು ಬೇರೆ ದೃಷ್ಟಿಯಿಂದ ಅಲ್ಲ ಎಂದು ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

Advertisement

ಬಿಜೆಪಿ ಯುವ ಮೋರ್ಚಾ ಪದಾಧಿಕಾರಿಗಳ ಸಭೆಯಲ್ಲಿ ಭಾಗವಹಿಸುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಯಡಿಯೂರಪ್ಪ ಅಧಿಕಾರದಲ್ಲಿ ಇರಲಿ ಬಿಡಲಿ, ವಿಪಕ್ಷದಲ್ಲೇ ಇರಲಿ ಹೋರಾಟವನ್ನೇ ಮೈಗೂಡಿಸಿಕೊಂಡವರು ಹಾಗಾಗಿ ಆ ಮಾತನ್ನು ಹೇಳಿದ್ದಾರೆ ಎಂದರು.

ವಿರೋಧ ಪಕ್ಷಗಳು ಟೀಕೆ ಮಾಡಿದಾಗ ಟಾಂಗ್ ಕೊಡುವುದು ಇದೆ. ಸರ್ಕಾರದ ವಿಷಯ, ಅಧಿಕಾರದ ಬಗ್ಗೆ ಮಾತನಾಡಲಿಕ್ಕೆ ಆಗುವುದಿಲ್ಲ. ಏಕೆಂದರೆ ನಾನೊಬ್ಬ ಪಕ್ಷದ ಸಾಮಾನ್ಯ ಕಾರ್ಯಕರ್ತ ಎಂದು ಪ್ರಶ್ನೆಗೆ ಉತ್ತರಿಸಿದರು.

ಯಡಿಯೂರಪ್ಪ ಅವರು ಸಚಿವ ಸಂಪುಟದ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಯಶಸ್ವಿಯಾಗಿ ಕೆಲಸ ಮಾಡುತ್ತಿದ್ದಾರೆ ಎಂದರು. ಕೆಲ ಪದಾಧಿಕಾರಿಗಳ ನೇಮಕ ಕುರಿತಂತೆ ಕೇಳಲಾದ ಪ್ರಶ್ನೆಗೆ, ಯುವ ಮೋರ್ಚಾದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ‌ನಾನು ಈಗಲೂ ಪ್ರಧಾನ ಕಾರ್ಯದರ್ಶಿ ಆಗಿ ಕೆಲಸ ಮಾಡುತ್ತಿದ್ದೇನೆ ಎಂದು ಉತ್ತರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next