Advertisement

ರಾಹುಲ್‌ ಗಾಂಧಿಗೆ ತಲೆ ತಿರುಗಿದೆ: B.S Yediyurappa

10:27 PM Apr 24, 2023 | Shreeram Nayak |

ಶಿವಮೊಗ್ಗ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಗೆ ತಲೆ ತಿರುಗಿದೆ. ವೀರಶೈವ ಲಿಂಗಾಯತರ ಬಗ್ಗೆ ಅವರಿಗೆ ಏನು ಗೊತ್ತಿದೆ? ಬಸವಣ್ಣನವರ ತತ್ವ-ಸಿದ್ಧಾಂತದ ಬಗ್ಗೆ ಏನು ಗೊತ್ತಿದೆ? ಈಗ ವೀರಶೈವರ ಬಗ್ಗೆ ಏನೋ ಭಾರೀ ತಿಳಿದವರ ರೀತಿ ಮಾತನಾಡುತ್ತಿದ್ದಾರೆ. ಇವರ ಈ ರೀತಿಯ ರಾಜಕಾರಣವೆಲ್ಲ ಇಲ್ಲಿ ನಡೆಯಲ್ಲ ಎಂದು ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನರೇಂದ್ರ ಮೋದಿ, ಅಮಿತ್‌ ಶಾ ಎದುರು ರಾಹುಲ್‌ ಗಾಂಧಿ  ಯಾವ ಲೆಕ್ಕ? ಕಾಂಗ್ರೆಸ್‌ನವರು ಏನೋ ಹೇಳಬೇಕು ಎಂದು ಏನೆನೆಲ್ಲಾ ಹೇಳುತ್ತಿದ್ದಾರೆ. ಯಾವುದೂ ಸರಿಯಾಗಿ ಗೊತ್ತಿಲ್ಲದ ರಾಹುಲ್‌ ಯಾರೋ ಹೇಳಿದ್ದನ್ನು ಕೇಳಿಕೊಂಡು ಮಾತನಾಡುತ್ತಿದ್ದಾರೆ. ಇದೆಲ್ಲ ನಡೆಯುವುದಿಲ್ಲ. ಸಿದ್ದರಾಮಯ್ಯ ಲಿಂಗಾಯತ ಸಮಾಜದ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ವಿಪಕ್ಷ ನಾಯಕ ಎಂಬುದರ ಅರಿವಿಲ್ಲದೇ ಮಾತನಾಡುತ್ತಿದ್ದಾರೆ. ಜನ ಅವರಿಗೆ ತಕ್ಕ ಉತ್ತರ ಕೊಡುತ್ತಾರೆ. ಈ ಬಾರಿ ಸಿದ್ದರಾಮಯ್ಯ ಗೆಲ್ಲೋದು ಕಷ್ಟ. ನಾವು ಆ ರೀತಿ ತಂತ್ರ ಮಾಡಿದ್ದೇವೆ. ಕಾಂಗ್ರೆಸ್‌ಗೆ ಜನ ಈ ಬಾರಿ ರಾಜ್ಯಾದ್ಯಂತ ತಕ್ಕ ಪಾಠ ಕಲಿಸುತ್ತಾರೆ ಎಂದರು.

ಸಂತೋಷ್‌ ಅವರು ಬಿಜೆಪಿಯ ಹಿರಿಯ ಮುಖಂಡರು. ಅವರ ಬಗ್ಗೆ ಯಾರಾದರೂ ಹಗುರವಾಗಿ ಮಾತನಾಡಿದರೆ ಸಹಿಸಲ್ಲ. ಅವರ ಬಗ್ಗೆ ಟೀಕೆ ಮಾಡಲು ಯೋಗ್ಯತೆ ಇಲ್ಲ. ಸಂತೋಷ್‌ ಸಂಘಟನೆಗಾಗಿ ಕೆಲಸ ಮಾಡುತ್ತಿದ್ದಾರೆ. ಅವರ ಬಗ್ಗೆ ಮಾತನಾಡೋದು ಸರಿಯಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next