Advertisement

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

08:52 PM Apr 25, 2024 | Team Udayavani |

ಬೀದರ: ಬಿಜೆಪಿ ಅಭ್ಯರ್ಥಿ ವಿರುದ್ಧ ಮುನಿಸಿನಿಂದಾಗಿ ಔರಾದ ಶಾಸಕ, ಮಾಜಿ ಸಚಿವ ಪ್ರಭು ಚವ್ಹಾಣ ಲೋಕಸಭಾ ಚುನಾವಣಾ ಪ್ರಚಾರದಿಂದ ದೂರ ಉಳಿದ ಬಗ್ಗೆ ಪ್ರತಿಕ್ರಿಯಿಸಲು ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ನಿರಾಕರಿಸಿದರಲ್ಲದೇ ಮಾಧ್ಯಮದವರ ವಿರುದ್ಧ ಗರಂ ಆದ ಘಟನೆ ನಡೆಯಿತು.

Advertisement

ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ ಪರ ಪ್ರಚಾರಾರ್ಥ ಗುರುವಾರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದ ಬಿಎಸ್‌ವೈ ಮಾಧ್ಯಮಗಳ ಜತೆ ಮಾತನಾಡಿದರು. ಈ ವೇಳೆ ಶಾಸಕ ಚವ್ಹಾಣ ಹೆಸರು ಹೇಳುತ್ತಿದ್ದಂತೆ ಸಿಡಿಮಿಡಿಕೊಂಡರು.

ಲೋಕಸಭೆ ಚುನಾವಣೆ ಮತದಾನಕ್ಕೆ ದಿನಗಣನೆ ಶುರುವಾದರೂ ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ ಜತೆಗಿನ ಔರಾದ ಶಾಸಕ ಪ್ರಭು ಚವ್ಹಾಣ ಮುನಿಸು ಮಾತ್ರ ಇನ್ನೂ ಶಮನವಾಗಿಲ್ಲ. ಪಕ್ಷದ ಹೈಕಮಾಂಡ್‌ ಮುನಿಸು ಶಮನಕ್ಕೆ ಶತ ಪ್ರಯತ್ನ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಸದ್ಯ ಆರೋಗ್ಯದ ಸಮಸ್ಯೆ ಕಾರಣ ಮಹಾರಾಷ್ಟ್ರದ ಮುಂಬೈನಲ್ಲಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪ ಅವರು ಶಾಸಕ ಚವ್ಹಾಣ ಕ್ಷೇತ್ರದಲ್ಲಿ ಪ್ರಚಾರ ಕಾರ್ಯಕ್ರಮಕ್ಕೆ ಆಗಮಿಸಿದರೂ ಅವರತ್ತ ಸುಳಿಯಲೇ ಇಲ್ಲ.

Advertisement

Udayavani is now on Telegram. Click here to join our channel and stay updated with the latest news.

Next