Advertisement

ಪೌರತ್ವ ಪ್ರತಿಭಟನೆ: ಶಾಸಕರೇ ಮಾತಿನ ಮೇಲೆ ಹಿಡಿತವಿರಲಿ: ಬಿ ಎಸ್ ಯಡಿಯೂರಪ್ಪ

10:00 AM Dec 21, 2019 | Team Udayavani |

ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಹಲವೆಡೆ ಹಿಂಸಾತ್ಮಕ ರೂಪಕ್ಕೆ ತಿರುಗಿದ ಹಿನ್ನಲೆ ಸ್ವ ಪಕ್ಷದ ಸಚಿವರು ಮತ್ತು ಶಾಸಕರಿಗೆ ಮಾತಿನ ಮೇಲೆ ನಿಯಂತ್ರಣವಿರಿಸುವಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ ಎನ್ನಲಾಗಿದೆ.

Advertisement

ಮಂಗಳೂರು ಸೇರಿದಂತೆ ಹಲವೆಡೆ ಪ್ರತಿಭಟನೆ ಹಿಂಸಾ ರೂಪಕ್ಕೆ ತಿರುಗಿರುವ ಕಾರಣ ಬಿಎಸ್ ವೈ ಈ ರೀತಿ ಮನವಿ ಮಾಡಿದ್ದಾರೆ ಎನ್ನಲಾಗಿದೆ.

ಮಾತಿನ ಮೇಲೆ ನಿಯಂತ್ರಣವಿರಲಿ. ಮತೀಯ ಭಾವನೆ ಕೆರಳಿಸುವ ಹೇಳಿಕೆ ಕೊಡಬೇಡಿ ಎಂದು ಯಡಿಯೂರಪ್ಪ ತಮ್ಮ ಪಕ್ಷದ ಶಾಸಕರಿಗೆ ತಿಳಿಸಿದ್ದಾರೆ ಎನ್ನಲಾಗಿದೆ.

ಗುರುವಾರ ಮಧ್ಯಾಹ್ನ ಹಿಂಸಾರೂಪಕ್ಕೆ ತಿರುಗಿದ್ದ ಮಂಗಳೂರು ಶುಕ್ರವಾರ ಶಾಂತಯಿಂದಿದೆ.

ಪೊಲೀಸರು ಭದ್ರತೆಗಾಗಿ ಕಟ್ಟೆಚ್ಚರ ನಡೆಸಿದ್ದು, ಬಿಗು ಬಂದೋಬಸ್ತ್ ಮಾಡಲಾಗಿದೆ.

Advertisement

ಶನಿವಾರ ನಿಗದಿತ ಕಾರ್ಯಕ್ರಮಕ್ಕೆ ಬಿ ಎಸ್ ಯಡಿಯೂರಪ್ಪ ಮಂಗಳೂರಿಗೆ ಬರುವ ಸಾಧ್ಯತೆಯಿದೆ.

Advertisement

Udayavani is now on Telegram. Click here to join our channel and stay updated with the latest news.

Next