Advertisement

ಅರುಣ್ ಸಿಂಗ್ ಬಂದುಹೋದ ಬಳಿಕ ಜಾಲಿ ಮೂಡ್ ನಲ್ಲಿದ್ದಾರೆ ಸಿಎಂ ಯಡಿಯೂರಪ್ಪ

02:13 PM Jun 19, 2021 | Team Udayavani |

ಬೆಂಗಳೂರು: ನಾಯಕತ್ವ ಬದಲಾವಣೆ ಚರ್ಚೆ ತಾರಕಕ್ಕೇರಿದ ಕಾರಣ ಬಿಜೆಪಿ  ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ರಾಜ್ಯಕ್ಕೆ ಆಗಮಿಸಿ ಮೂರು ದಿನ ಚರ್ಚೆ ಮಾಡಿ ಹೋಗಿದ್ದಾರೆ. ಕೆಲವು ಶಾಸಕರ ಜೊತೆ ವೈಯಕ್ತಿಕವಾಗಿ ಮಾತನಾಡಿರುವ ಅರುಣ್ ಸಿಂಗ್ ಸದ್ಯ ದೆಹಲಿಗೆ ತೆರಳಿದ್ದಾರೆ. ಆದರೆ ಇದಾದ ಬಳಿಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜಾಲಿ ಮೂಡ್ ನಲ್ಲಿದ್ದಾರೆ.

Advertisement

ಸುದ್ದಿಗಾರರ ಜೊತೆ ಮಾತನಾಡಿ ತೆರಳುವಾಗ ಸಚಿವ ಅಶೋಕ್ ಗೆ “ಎಲ್ಲಿಗೆ ಹೋಗ್ತಾ ಇದ್ದೀಯಾ ಎಂದರು. ಇದಕ್ಕೆ ‘ಸರ್, ಲಾಯರ್ ನೋಡಬೇಕು, ಮನೆಗೆ ಹೋಗ್ತೀನಿ‌ ಎಂದು ಅಶೋಕ್  ಹೇಳಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ “ಏನು.. ನಿನ್‌ ಮೇಲೆ ಕೇಸ್ ಹಾಕಿದ್ದಾರಾ..!? ಎಂದು ತಮಾಷೆ ಮಾಡಿ ನಕ್ಕರು.

ಇದನ್ನೂ ಓದಿ:ಗೊಂದಲ ದಿಲ್ಲಿಗೆ ವರ್ಗ : ವರಿಷ್ಠರಿಗೆ ವಾಸ್ತವ ವರದಿ ಸಲ್ಲಿಸಲಿರುವ ಅರುಣ್‌ ಸಿಂಗ್‌

“ಲಕ್ಷ್ಮಣ ಸವದಿ ಮೇಲೆ ಕೇಸ್ ಹಾಕಬೇಕು, ದಾರಿ ತಪ್ಪುತ್ತಿದ್ದಾರೆ ಎಂದ ಅಶೋಕ್ ಹೇಳಿದಾಗ, “ನಿನ್ನ ಸ್ನೇಹಿತನ ರಕ್ಷಣೆ ಮಾಡೋದು ನಿನ್ನ ಕೆಲಸ ಅಲ್ವಾ., ಮಾಡು’ ಎಂದು‌ ಯಡಿಯೂರಪ್ಪ ನಗೆ ಚಟಾಕಿ ಹಾರಿಸಿದರು. ಯಡಿಯೂರಪ್ಪ ಮಾತಿಗೆ ಡಿಸಿಎಂ ಲಕ್ಷ್ಮಣ್ ಸವದಿ, ಸಚಿವ ಅಶೋಕ್ ನಕ್ಕರು.

Advertisement

Udayavani is now on Telegram. Click here to join our channel and stay updated with the latest news.

Next