Advertisement

ಅಮಿತ್ ಶಾ ಭೇಟಿಯಾದ ಬಿಎಸ್ ವೈ: ಪುತ್ರನ ರಾಜಕೀಯದ ಬಗ್ಗೆ ಚರ್ಚೆ

11:23 AM Aug 04, 2022 | Team Udayavani |

ಬೆಂಗಳೂರು: ಬೆಂಗಳೂರಿಗೆ ಆಗಮಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಗುರುವಾರ ಭೇಟಿ ಮಾಡಿ ಚರ್ಚೆ ಮಾಡಿದ್ದಾರೆ.

Advertisement

ಖಾಸಗಿ ಹೊಟೇಲ್ ನಲ್ಲಿ ವಾಸ್ತವ್ಯ ಇರುವ ಅಮಿತ್ ಶಾ ಅವರನ್ನು ಭೇಟಿ ಮಾಡಿರುವ ಯಡಿಯೂರಪ್ಪ ರಾಜ್ಯದ ಪ್ರಸ್ತುತ ರಾಜಕಾರಣದ ಬಗ್ಗೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

ತಮ್ಮ ಪುತ್ರ ವಿಜಯೇಂದ್ರಗೆ ಮುಂದಿನ ಚುನಾವಣೆಯಲ್ಲಿ ಶಿಕಾರಿಪುರದಿಂದ ಟಿಕೆಟ್ ನೀಡುವುದು, ಚುನಾವಣಾ ರಾಜಕಾರಣದಿಂದ ತಮ್ಮ ನಿವೃತ್ತಿ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಈ ಭೇಟಿ ಸಂದರ್ಭದಲ್ಲಿ ಪ್ರಾಸಂಗಿಕವಾಗಿ ಪ್ರಸ್ತಾಪವಾಗಿದೆ.

ಇದನ್ನೂ ಓದಿ:ಹೆದ್ದಾರಿಯಲ್ಲಿ ಬಿರುಕು: ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಘನ ಸಂಚಾರಕ್ಕೆ ನಿರ್ಬಂಧ

ಯಡಿಯೂರಪ್ಪ ಬಗ್ಗೆ ಮೊದಲಿನಿಂದಲೂ ಸಾಫ್ಟ್ ಕಾರ್ನರ್‌ ಹೊಂದಿರುವ ಅಮಿತ್ ಶಾ, ಯಾವುದೇ ರೀತಿಯಿಂದಲೂ ವಿಚಲಿತರಾಗಬೇಡಿ ಎಂದು ಸಲಹೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next