Advertisement

ಮುರುಘಾ ಶ್ರೀಗಳ ವಿರುದ್ಧ ಕೇಳಿ ಬಂದಿರುವ ಆರೋಪ ಸುಳ್ಳು: ಬಿಎಸ್‌ ವೈ

01:14 PM Aug 28, 2022 | Team Udayavani |

ಬೆಂಗಳೂರು: ಮುರುಘಾ ಶ್ರೀಗಳ ವಿರುದ್ದ ಕೇಳಿ ಬಂದಿರುವ ಲೈಂಗಿಕ ಕಿರುಕುಳ ಆರೋಪದ ಬಗ್ಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು, ಮುರುಘಾ ಶ್ರೀಗಳ ವಿರುದ್ದ ಆ ರೀತಿ ಸುಳ್ಳು ಆರೋಪ ಮಾಡಿದ್ದಾರೆ. ಆರೋಪದಲ್ಲಿ ಯಾವುದೇ ಸತ್ಯಾಂಶ ಇಲ್ಲ, ತನಿಖೆ ಆದ ಮೆಲೆ ಸತ್ಯಾಂಶ ಹೊರಬರುತ್ತದೆ. ಶ್ರೀಗಳು ಆರೋಪ ಮುಕ್ತರಾಗಿ ಬರ್ತಾರೆ ಎಂಬ ಸಂಪೂರ್ಣ ವಿಶ್ವಾಸ ಇದೆ ಎಂದು ಹೇಳಿದರು.

ಅಪ್ರಾಪ್ತ ವಯಸ್ಕ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಸಂಬಂಧ ಚಿತ್ರದುರ್ಗದ ಮರುಘಾ ಶ್ರೀ ಸಹಿತ ಐವರ ವಿರುದ್ಧ ಪೋಕ್ಸೊ ಕಾಯಿದೆಯಡಿ ಪ್ರಕರಣ ದಾಖಲಾಗಿದೆ.

ಈ ಬಗ್ಗೆ ಮಾತಾನಾಡಿರುವ ಮುರುಘಾ ಶ್ರೀಗಳು, ಮುರುಘಾ  ಶರಣರ ಬದುಕಿನಲ್ಲಿ ಅತ್ಯಂತ ದೊಡ್ಡ ಕಿರುಕುಳ ಇದಾಗಿದೆ. 21ನೇ ಶತಮಾನದ ಕರಾಳ ಘಟನೆ ಇದಾಗಿದೆ. ರೋಲ್‌ಕಾಲ್‌, ಬ್ಲಾಕ್‌ಮೇಲ್‌ ತಂತ್ರದ ಮೂಲಕ ಅಧಿಕಾರ ಬೇಕು ಎಂಬ ಧೋರಣೆ ಮುಖ್ಯವಾಗಿದೆ ಎಂದು ಡಾ| ಶಿವಮೂರ್ತಿ ಮುರುಘಾ ಶರಣರು ಬೇಸರ ವ್ಯಕ್ತಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next