Advertisement

ಪುತ್ರನ ಚುನಾವಣೆ ಸ್ಪರ್ಧೆಯ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ ಯಡಿಯೂರಪ್ಪ

12:57 PM Sep 17, 2021 | Team Udayavani |

ಮೈಸೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪುತ್ರ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಚುನಾವಣಾ ರಾಜಕೀಯದ ಕುರಿತು ಮಾತನಾಡಿದರು.

Advertisement

ಮೈಸೂರಿನ ಸುತ್ತೂರು ಶಾಖಾ ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ, ಸದ್ಯಕ್ಕೆ ವಿಜಯೇಂದ್ರ ಯಾವುದೇ ಉಪ ಚುನಾವಣೆ ಸ್ಪರ್ಧೆ ಮಾಡುವುದಿಲ್ಲ. ಅವರು ಯಾವ ಕ್ಷೇತ್ರದಲ್ಲಿ ಮುಂದೆ ನಿಲ್ಲುತ್ತಾರೆ ಎನ್ನುವುದು ನಿರ್ಧಾರವಾಗಿಲ್ಲ ಎಂದರು.

ಸದ್ಯ ಅವರು ರಾಜ್ಯಾದ್ಯಂತ ಪ್ರವಾಸ ಮಾಡುತ್ತಿದ್ದಾರೆ. ನಾನು ಮತ್ತು ರಾಜ್ಯಾಧ್ಯಕ್ಷರು ಸೇರಿ ರಾಜ್ಯ ಪ್ರವಾಸ ಮಾಡುತ್ತೇವೆ. ಅಧಿವೇಶನ ಮುಗಿಯಲಿ, 15 ದಿನಗಳ ನಂತರ ಈ‌ ಬಗ್ಗೆ ರೂಪುರೇಷೆ ಮಾಡುತ್ತೇವೆ ಎಂದು ಬಿಎಸ್ ವೈ ಹೇಳಿದರು.

ಬೊಮ್ಮಾಯಿ ಉತ್ತಮ ಆಡಳಿತ ನೀಡುತ್ತಿದ್ದಾರೆ ಎನ್ನುವುದು ನನ್ನ ಅಭಿಪ್ರಾಯ. ರಾಜ್ಯದ ಜನರ ಅಭಿಪ್ರಾಯವೂ ಅದೇ ಇದೆ. ಮುಂದಿನ ದಿನದಲ್ಲಿ ಇನ್ನು ಉತ್ತಮ ಆಡಳಿತ ನೀಡಲಿದ್ದಾರೆ ಎಂದು ಸಿಎಂ ಬೊಮ್ಮಾಯಿ ಪರ ಬಿ ಎಸ್ ಯಡಿಯೂರಪ್ಪ ಬ್ಯಾಟಿಂಗ್ ನಡೆಸಿದರು.

Advertisement

Udayavani is now on Telegram. Click here to join our channel and stay updated with the latest news.

Next