Advertisement

ಬೊಮ್ಮಲಾಪುರಕ್ಕೆ ಬಿಎಸ್ ಯಡಿಯೂರಪ್ಪ ಭೇಟಿ: ರವಿ ಕುಟುಂಬಕ್ಕೆ 5 ಲಕ್ಷ ರೂ. ನೆರವು

12:09 PM Jul 30, 2021 | Team Udayavani |

ಗುಂಡ್ಲುಪೇಟೆ (ಚಾಮರಾಜನಗರ): ತಾಲೂಕಿನ ಬೊಮ್ಮಲಾಪುರ ಗ್ರಾಮಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭೇಟಿ ನೀಡಿ ಆತ್ಮಹತ್ಯೆಗೆ ಶರಣಾದ ರವಿ ಅವರ ತಾಯಿ ರೇವಮ್ಮ ಅವರಿಗೆ ಐದು ಲಕ್ಷ ರೂ. ನೆರವು ನೀಡಿ ಸಾಂತ್ವನ ಹೇಳುವ ಮೂಲಕ ಧೈರ್ಯ ತುಂಬಿ ನಿಮ್ಮ ಕುಟುಂಬಕ್ಕೆ ಬೆನ್ನೆಲು ಬಾಗಿರುವುದಾಗಿ ಭರವಸೆ ನೀಡಿದರು.

Advertisement

ಈ ವೇಳೆ ಮಾತನಾಡಿದ ಯಡಿಯೂರಪ್ಪ, ರವಿ ಆತ್ಮಹತ್ಯೆಗೆ ಶರಣಾಗಿರುವುದು ವೈಯಕ್ತಿಕವಾಗಿ ನೋವು ತಂದಿದ್ದು, ಇಂತಹ ಕೆಲಸಕ್ಕೆ ಕೈಹಾಕಬಾರದಿತ್ತು. ಇಂದು ಐದು ಲಕ್ಷ ನೀಡಿದ್ದು, ಮುಂದಿನ ದಿನದಲ್ಲಿ ಮನೆ ದುರಸ್ತಿಗೆ ಇನ್ನೂ ಹೆಚ್ಚುವರಿ ಐದು ಲಕ್ಷ ಕೊಡುವುದಾಗಿ ತಿಳಿಸಿದರು.

ಇದನ್ನೂ ಓದಿ:ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಮಧು ಬಂಗಾರಪ್ಪ: ಬೆಂಗಲಿಗರ ಸಂಭ್ರಮಾಚರಣೆ

ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ಆಕ್ಸಿಜನ್ ದುರಂತದಲ್ಲಿ ಮೃತ ಪಟ್ಟಾಗ ಬರದೇ ಅಭಿಮಾನಿ ಮೃತ ಪಟ್ಟಾಗ ಬಂದಿದ್ದೀರಾ ಎಂಬ ಪ್ರಶ್ನೆಗೆ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಅಧಿಕಾರಿಗಳು ಇದ್ದು ಕಾರ್ಯ ನಿರ್ವಹಿಸಿದ್ದಾರೆ ಎಂದರು.

ಶಾಸಕ‌ ಸಿ.ಎಸ್.ನಿರಂಜನಕುಮಾರ್, ಎನ್.ಮಹೇಶ್, ಎಸ್.ಆರ್.ವಿಶ್ವನಾಥ್, ಮೂಡ ಅಧ್ಯಕ್ಷ ಎಚ್.ವಿ.ರಾಜೀವ್, ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ, ಪ್ರವಾಸೋದ್ಯಮ ನಿಗಮದ ಅಧ್ಯಕ್ಷ ಕಾ.ಪು.ಸಿದ್ದಲಿಂಗಸ್ವಾಮಿ ಸೇರಿದಂತೆ ಇತರರು ಹಾಜರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next