Advertisement

ಅಧರ್ಮದ ವಿರುದ್ಧ ಧರ್ಮದ ವಿಜಯ: ವಿಜಯ ದಶಮಿಯ ಶುಭ ಕೋರಿದ ಸಿಎಂ ಬಿಎಸ್ ವೈ

07:34 AM Oct 26, 2020 | keerthan |

ಬೆಂಗಳೂರು: ನಾಡಿನೆಲ್ಲೆಡೆ ಇಂದು ವಿಜಯ ದಶಮಿ ಆಚರಿಸಲಾಗುತ್ತಿದೆ. ಕೋವಿಡ್ 19 ಸೋಂಕಿನ ನಡುವೆ ಜನರು ಭಕ್ತಿಯಿಂದ ವಿಜಯ ದಶಮಿ ಆಚರಿಸುತ್ತಿದ್ದಾರೆ. ನಾಡಿನ ಸಮಸ್ತ ಜನರಿಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿಜಯ ದಶಮಿಯ ಶುಭಾಶಯಗಳನ್ನು ಕೋರಿದ್ದಾರೆ.

Advertisement

ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಯಡಿಯೂರಪ್ಪ, ನಾಡಿನ ಸಮಸ್ತ ಜನತೆಗೆ ವಿಜಯದಶಮಿ ಹಬ್ಬದ ಹಾರ್ದಿಕ ಶುಭಕಾಮನೆಗಳು. ಅಧರ್ಮದ ವಿರುದ್ಧ ಧರ್ಮದ ವಿಜಯದ ಸಂಕೇತವೇ ವಿಜಯದಶಮಿ. ಈ ಕೋವಿಡ್ ಮಹಾಮಾರಿಯ ವಿರುದ್ಧ ನಮಗೆ ನಾಡದೇವತೆ ಚಾಮುಂಡೇಶ್ವರಿ ಗೆಲುವನ್ನು ಅನುಗ್ರಹಿಸಲಿ, ಜನರಿಗೆ ಆರೋಗ್ಯ, ಸಂತೋಷ, ಸಮೃದ್ಧಿಗಳನ್ನು ಕರುಣಿಸಲಿ ಎಂದು ಪ್ರಾರ್ಥಿಸೋಣ ಎಂದಿದ್ದಾರೆ.

ದಸರಾ ಹಬ್ಬದ ಕೊನೆಯ ದಿನವಾದ ಇಂದು ಮೈಸೂರಿನಲ್ಲಿ ವಿಶೇಷ ಆಚರಣೆಗಳು ನಡೆಯಲಿದೆ. ಕೋವಿಡ್-19 ಸೋಂಕು ಭೀತಿಯಿಂದ ವಿಶ್ವವಿಖ್ಯಾತ ಜಂಬೂ ಸವಾರಿ ಅರಮನೆ ಆವರಣಕ್ಕಷ್ಟೇ ಸೀಮಿತವಾಗಲಿದೆ. ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರು ದಸರಾ ಜಂಬೂ ಸವಾರಿಗೆ ಚಾಲನೆ ನೀಡಲಿದ್ದಾರೆ. ಮಧ್ಯಾಹ್ನ 2.59ರಿಂದ 3.20ರ ಮಕರ ಲಗ್ನದಲ್ಲಿ ಸಿಎಂ ಯಡಿಯೂರಪ್ಪ ಅವರಿಂದ ನಂದಿಧ್ವಜಕ್ಕೆ ಪೂಜೆ ನೆರವೇರಲಿದೆ. ಮಧ್ಯಾಹ್ನ 3.40ರಿಂದ 4.15ರ ಕುಂಭ ಲಗ್ನದಲ್ಲಿ ಯಡಿಯೂರಪ್ಪ ಹಾಗೂ ಯದುವೀರ್‌ ಅವರಿಂದ ಪುಷ್ಪಾರ್ಚನೆ ನಡೆಯಲಿದೆ.

Advertisement

Udayavani is now on Telegram. Click here to join our channel and stay updated with the latest news.

Next