Advertisement

ರೈತರೇ, ಕಾಂಗ್ರೆಸ್ ನಿಮ್ಮ ಹೆಗಲ ಮೇಲೆ ಬಂದೂಕಿಟ್ಟು ಗುಂಡು ಹಾರಿಸುತ್ತಿದೆ: ಶ್ರೀರಾಮುಲು

08:09 PM Jan 26, 2021 | Team Udayavani |

ಬೆಂಗಳೂರು: ಸಂವಿಧಾನ ಎಲ್ಲ ಹಕ್ಕುಗಳನ್ನು ನೀಡಿದೆ. ಮಾತುಕತೆ ಮೂಲಕ ಎಲ್ಲ ಸಮಸ್ಯೆಯನ್ನೂ ಬಗೆಹರಿಸಿಕೊಳ್ಳಬಹುದಾಗಿದೆ. ಅದು ಬಿಟ್ಟು ಪ್ರಜಾಪ್ರಭುತ್ವ ವಿರೋಧಿ ಕೃತ್ಯದಲ್ಲಿ ತೊಡಗದಿರಿ. ರೈತರೇ ನೆನಪಿರಲಿ, ಕಾಂಗ್ರೆಸ್ ನಿಮ್ಮ ಹೆಗಲ ಮೇಲೆ ಬಂದೂಕು ಇಟ್ಟು ಗುಂಡು ಹಾರಿಸುತ್ತಿದೆ ಎಂಬುದನ್ನು ಅರಿಯಿರಿ ಎಂದು ಸಚಿವ ಬಿ ಶ್ರೀರಾಮುಲು ತಿಳಿಸಿದ್ದಾರೆ.

Advertisement

ಟ್ವೀಟ್ ಮೂಲಕ ರೈತರಲ್ಲಿ ಮನವಿ ಮಾಡಿದ ಅವರು, ಪ್ರತಿಭಟನೆ ಮಾಡುವ, ಕೇಂದ್ರ ಸರ್ಕಾರಕ್ಕೆ ಬೇಡಿಕೆ ಇಡುವ ಹಕ್ಕು ಎಲ್ಲರಿಗೂ ಇದೆ. ಆದರೆ, ನಿಮ್ಮೆಲ್ಲ ಬೇಡಿಕೆ ಈಡೇರಿಸುತ್ತೇವೆ ಎಂದರೂ ದಿಲ್ಲಿಯಲ್ಲಿ ಪ್ರತಿಭಟನೆ ಹೆಸರಿನಲ್ಲಿ ನಡೆಸುತ್ತಿರುವ ಹಿಂಸಾಚಾರ, ಪೊಲೀಸರ ಮೇಲೆ ದಾಳಿ ಮಾಡಿದ್ದು ಸರಿಯಲ್ಲ ಎಂದರು.

ರೈತರೇ, ಕುತಂತ್ರಿಗಳ ಮಾತು ಕೇಳದಿರಿ. ಕೃಷಿ ಕಾಯ್ದೆ ಕುರಿತು ಕಾಂಗ್ರೆಸ್ ಸೇರಿ ಹಲವು ಪ್ರತಿಪಕ್ಷಗಳು ರೈತರನ್ನು ದಾರಿತಪ್ಪಿಸುತ್ತಲೇ ಇವೆ. ಈಗಲೂ ದಿಲ್ಲಿಯ ಹಿಂಸಾಚಾರಕ್ಕೆ ಪ್ರತಿಪಕ್ಷಗಳ ಹುನ್ನಾರವೇ ಕಾರಣವಾಗಿದೆ. ಅನ್ನ ನೀಡುವ ಕೈಗಳು ಇಂತಹ ಷಡ್ಯಂತ್ರಕ್ಕೆ ಮರುಳಾಗಿ ಕತ್ತಿ ಹಿಡಿಯಬಾರದು ಎಂದು ಮನವಿ ಮಾಡಿಕೊಳ್ಳುತ್ತೇನೆ ಎಂದು ಇದೇ ವೇಳೆ ಶ್ರೀರಾಮುಲು ತಿಳಿಸಿದರು.

ಇದನ್ನೂ ಓದಿ:  ರಫೇಲ್‌ ವಿರಾಟ ರೂಪ, ವೈವಿಧ್ಯತೆಯ ವೈಭವ : ಗಣರಾಜ್ಯ ಪರೇಡ್ ನಲ್ಲಿ ರಕ್ಷಣಾಪಡೆಗಳ ಬಲಪ್ರದರ್ಶನ

Advertisement

Udayavani is now on Telegram. Click here to join our channel and stay updated with the latest news.

Next