Advertisement

ಸೋತವರಿಗೆ ಸಚಿವ ಸ್ಥಾನ ಹೈಕಮಾಂಡ್‌ಗೆ ಬಿಟ್ಟಿದ್ದು: ಬಿ. ಶ್ರೀರಾಮುಲು

10:20 AM Jan 27, 2020 | sudhir |

ರಾಯಚೂರು: ಉಪ ಚುನಾವಣೆಯಲ್ಲಿ ಪರಾಭವಗೊಂಡ ಅಭ್ಯರ್ಥಿಗಳಿಗೆ ಸಚಿವ ಸ್ಥಾನ ನೀಡಬೇಕೋ ಬೇಡವೋ ಎನ್ನುವುದನ್ನು ಹೈಕಮಾಂಡ್‌ ನಿರ್ಧರಿಸಲಿದೆ ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ತಿಳಿಸಿದರು.

Advertisement

ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಸಿಎಂ ಯಡಿಯೂರಪ್ಪ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿ ಮಾಡಿದ್ದು, ಒಪ್ಪಿಗೆ ಸಿಕ್ಕಿದೆ. ಹೀಗಾಗಿ ಆದಷ್ಟು ತ್ವರಿತಗತಿಯಲ್ಲಿ ಸಚಿವ ಸಂಪುಟ ವಿಸ್ತರಣೆ ಆಗಲಿದೆ. ಸಚಿವ ಸ್ಥಾನ ವಿಚಾರದಲ್ಲಿ ಹಳೆ ಮತ್ತು ಹೊಸ ಶಾಸಕರ ನಡುವೆ ಮನಸ್ತಾಪಗಳೇನು ಇಲ್ಲ. ನಾನು ಉಪಮುಖ್ಯಮಂತ್ರಿ ಆಗಬೇಕು ಎನ್ನುವುದು ಜನಾಪೇಕ್ಷೆಯಾಗಿದೆ. ಆದರೆ, ಹೈಕಮಾಂಡ್‌ ಅಂತಿಮ ನಿರ್ಧಾರಕ್ಕೆ ನಾವು ಬದ್ಧ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next