Advertisement

ವರಿಷ್ಠರು ಹೇಳಿದರೆ 2 ಕಡೆ ಸ್ಪರ್ಧೆ: ಶ್ರೀರಾಮುಲು

11:16 PM Feb 23, 2023 | sudhir |

ಬಳ್ಳಾರಿ: ಬಿಜೆಪಿ ವರಿಷ್ಠರು ಬಯಸಿದರೆ ಈ ಬಾರಿಯೂ ಎರಡು ಕಡೆ ಸ್ಪರ್ಧೆ ಮಾಡುವೆ ಎಂದು ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.

Advertisement

ಸಂಡೂರಿನಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವ ರು, ರಾಜ್ಯದ ಹಲವು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುವಂತೆ ಆಹ್ವಾನ ಬರುತ್ತಿದೆ. ನಾನು ಬಳ್ಳಾರಿ ಜಿಲ್ಲೆಯಲ್ಲಿ ಸ್ಪರ್ಧೆ ಮಾಡುವ ಉದ್ದೇಶ ಹೊಂದಿದ್ದೇನೆ. ಸಂಡೂರು ಕ್ಷೇತ್ರದಿಂದಲೂ ಸ್ಪರ್ಧೆಗೆ ಒತ್ತಡವಿದೆ. ಒಂದು ವೇಳೆ ವರಿಷ್ಠರು ಬಯಸಿದರೆ ಇಲ್ಲಿ ಸ್ಪರ್ಧೆ ಮಾಡುವೆ ಎಂದರು.

ಸಂಡೂರಿನಲ್ಲಿ ಬಿಜೆಪಿ ಖಾತೆ ತೆರೆಯಬೇಕು. ನಾವು ಸಾಕಷ್ಟು ಪ್ರಯತ್ನ ಪಟ್ಟರೂ ಹಿಂದೆ ಆಗಿಲ್ಲ. ಈ ಬಾರಿ ಶತಾಯ ಗತಾಯ ಈ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಗೆಲ್ಲಲೇಬೇಕು ಎಂಬ ಗಟ್ಟಿ ಯತ್ನದಿಂದ ವರಿಷ್ಠ ನಾಯಕ ಅಮಿತ್‌ ಶಾ ಅವರ ನೇತೃತ್ವದಲ್ಲಿ ವಿಜಯ ಸಂಕಲ್ಪ ಯಾತ್ರೆ ನಡೆಸಲಾಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next