Advertisement

ಉಚಿತ ಮ್ಯಾಮೋಗ್ರಫಿ ತಪಾಸಣಾ ಶಿಬಿರ ಉದ್ಘಾಟಿಸಿದ ಸಂಸದ ಬಿ ವೈ ರಾಘವೇಂದ್ರ

12:03 PM Oct 11, 2023 | Team Udayavani |

ತೀರ್ಥಹಳ್ಳಿ : ನಮ್ಮ ದೇಶದಲ್ಲಿ ಕ್ಯಾನ್ಸರ್ ಸಂಬಂಧಿಸಿದ ಕಾಯಿಲೆಗಳು ಜಾಸ್ತಿ ಆಗುತ್ತಿದೆ. ಕಾಯಿಲೆ ಬಂದರೆ ಮಧ್ಯಮ ಕುಟುಂಬಕ್ಕೆ ಬಾರಿ ಸಮಸ್ಯೆ ಆಗುತ್ತದೆ. ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯುವುದು ಬಹಳ ಕಷ್ಟವಾಗುತ್ತದೆ. ಹಾಗಾಗಿ ಈ ಕ್ಯಾಂಪ್ ನಲ್ಲಿ ಭಾಗಿಯಾಗಿ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಂಸದ ಬಿ ವೈ ರಾಘವೇಂದ್ರ ಹೇಳಿದರು.

Advertisement

ಪಟ್ಟಣ ಪಂಚಾಯತ್ ಕಾರ್ಯಾಲಯದ ಪಕ್ಕದಲ್ಲಿ ನೆಡೆಯುತ್ತಿರುವ ಮಲೆನಾಡು ಮಹಿಳಾ ವೇದಿಕೆ ವತಿಯಿಂದ ಉಚಿತ ಮ್ಯಾಮೋಗ್ರಫಿ ತಪಾಸಣಾ ಶಿಬಿರ ಏರ್ಪಡಿಸಿದ್ದು ಇದರ ಉದ್ಘಾಟನೆ ನೆಡೆಸಿ ಮಾತನಾಡಿ ಸ್ತನ ಕ್ಯಾನ್ಸರ್ ಸಂಬಂಧಪಟ್ಟಂತೆ ಶಿಬಿರ ಏರ್ಪಡಿಸಲಾಗಿದೆ, ತಾಲೂಕಿನ ಮಹಿಳೆಯರಿಗೆ ಸಮಸ್ಯೆ ಇದ್ದಲ್ಲಿ ಇದರ ಸದುಪಯೋಗ ಪಡೆದುಕೊಳ್ಳಬಹುದು ಮೊದಲ ಸ್ಟೇಜ್ ನಲ್ಲೆ ಕಂಡು ಹಿಡಿದರೆ ಮುಂದೆ ಸಮಸ್ಯೆ ಆಗುವುದಿಲ್ಲ, ಹಾಗಾಗಿ ಇದರ ಸದುಪಯೋಗ ಪಡೆದುಕೊಳ್ಳಿ ಎಂದರು.

ಈ ಸಂದರ್ಭದಲ್ಲಿ ಶಾಸಕ ಆರಗ ಜ್ಞಾನೇಂದ್ರ, ಪ.ಪಂ ಅಧ್ಯಕ್ಷೆ ಗೀತಾ ರಮೇಶ್, ಡಾ. ಕೀರ್ತನ, ಸೇರಿ ಹಲವರು ಉಪಸ್ಥಿತರಿದ್ದರು.

ಇದನ್ನೂ ಓದಿ: Hamas War: ವ್ಹೀಲ್ ಚೇರ್ ನಲ್ಲಿ ಕುಳಿತು ಇಸ್ರೇಲ್ ಮೇಲೆ ಪ್ರತೀಕಾರ; ಈತನೇ ಹೊಸ ಬಿನ್ ಲಾಡೆನ್

Advertisement

Udayavani is now on Telegram. Click here to join our channel and stay updated with the latest news.

Next