Advertisement

Lok Sabha Election: ಈಶ್ವರಪ್ಪ ಏನು ಹೇಳಿದ್ರೂ ನನಗೆ ಆಶೀರ್ವಾದ: ಬಿ.ವೈ.ರಾಘವೇಂದ್ರ

01:00 PM Apr 17, 2024 | Team Udayavani |

ಶಿವಮೊಗ್ಗ: ಈಶ್ವರಪ್ಪ ಅವರು ಹಿರಿಯ ನಾಯಕರಿದ್ದಾರೆ. ಅವರು ಏನೇ ಹೇಳಿದರೂ ಅದು ನನಗೆ ಆಶೀರ್ವಾದ ಇದ್ದಂಗೆ ಎಂದು ಬಿಜೆಪಿ ಅಭ್ಯರ್ಥಿ ಹಾಗೂ ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.

Advertisement

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಸದರಿಗೆ ಭಯ ಉಂಟಾಗಿದೆ ಎಂಬ ಈಶ್ವರಪ್ಪರ ಹೇಳಿಕೆ ಕುರಿತಾಗಿ ಈ ಪ್ರತಿಕ್ರಿಯೆ ನೀಡಿದರು. ದೊಡ್ಡವರ ಬಗ್ಗೆ ದೊಡ್ಡವರು ಮಾತನಾಡುತ್ತಾರೆ. ಹಿರಿಯರಾದ ಈಶ್ವರಪ್ಪ ಏನು ಹೇಳಿದರೂ ಅದನ್ನು ನಾನು ಹಾರೈಕೆ ಎಂದುಕೊಳ್ಳುವೆ. ಚುನಾವಣೆ ಎಂದ ಮೇಲೆ ಭಯ- ಭಕ್ತಿ ಎಲ್ಲವೂ ಇದ್ದೇ ಇರುತ್ತದೆ. ಅವುಗಳನ್ನಿಟ್ಟುಕೊಂಡೇ ನಾವು ಚುನಾವಣೆ ನಡೆಸುತ್ತೇವೆ ಎಂದರು.

ಶಿವಮೊಗ್ಗ ಜಿಲ್ಲೆಯ ಶರಾವತಿ, ಕಾರ್ಖಾನೆ ಮುಚ್ಚಿರುವುದು, ಅರಣ್ಯ ಸಂಬಂಧಿ ಸಮಸ್ಯೆಗಳಿಗೆ ಕಾಂಗ್ರೆಸ್‌ ಮತ್ತು ಸ್ಥಳೀಯ ನಾಯಕರೇ ಕಾರಣ ಆಗಿದ್ದಾರೆ. ಕೆಪಿಸಿಸಿ ಅಧ್ಯಕ್ಷರು ಬಿಜೆಪಿಗೆ ಕೇಳಿದ ಎಲ್ಲಾ ಪ್ರಶ್ನೆಗಳನ್ನು ಕಾಂಗ್ರೆಸ್‌ ನಾಯಕರಿಗೇ ಕೇಳಿಕೊಳ್ಳಬೇಕು. ಇಲ್ಲಿನ ಸಮಸ್ಯೆಗಳಿಗೆ ಮೂಲ ಕಾಂಗ್ರೆಸ್‌ ಆಗಿದೆ ಎಂದು ಅವರು ಹೇಳಿದರು.

ನಾಮಪತ್ರ ಸಲ್ಲಿಕೆಗೆ ಎಚ್‌ಡಿಕೆ: ಏ.18 ರಂದು ಬೆಳಗ್ಗೆ 11.30ಕ್ಕೆ ನಾಮಪತ್ರ ಸಲ್ಲಿಸುವೆ. ರಾಮಣ್ಣ ಶ್ರೇಷ್ಠಿ ಪಾರ್ಕಿನಿಂದ ಮೆರವಣಿಗೆ ಹೊರಟು ನಂತರ ನಾಮಪತ್ರ ಸಲ್ಲಿಸಲಾಗುವುದು. ಅಂದು ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ, ಎಚ್‌.ಡಿ. ಕುಮಾರಸ್ವಾಮಿ ಸೇರಿದಂತೆ ಅನೇಕ ಮುಖಂಡರು ಭಾಗವಹಿಸಲಿದ್ದಾರೆ. ಅಂದಿನಿಂದ ಅಧಿಕೃತವಾಗಿ ಚುನಾವಣೆ ಕಣ ರಂಗೇರಲಿದೆ. ನಮ್ಮ ಕಾರ್ಯಕರ್ತರು ಬೂತ್‌ ಮಟ್ಟದಲ್ಲಿ ಕೆಲಸ ಮಾಡಲಿದ್ದಾರೆ. ನಮ್ಮ ಪಕ್ಷಕ್ಕೆ ಬೂತ್‌ ಮಟ್ಟದ ಅಧ್ಯಕ್ಷರು, ಕಾರ್ಯದರ್ಶಿಗಳೇ ಸ್ಟಾರ್‌ ಕ್ಯಾಂಪೇನರ್‌ಗಳಾಗಿದ್ದಾರೆ. ಅವರೇ ನಮಗೆ ವಿಶ್ವಾಸ ಎಂದು ರಾಘವೇಂದ್ರ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next