Advertisement

ಕುತೂಹಲ ಕೆರಳಿಸಿದ ವಿಜಯೇಂದ್ರ-ಮಠಾಧೀಶರ ಭೇಟಿ

09:50 PM Jun 10, 2021 | Team Udayavani |

ಚಿತ್ರದುರ್ಗ: ಜಿಲ್ಲೆಯ ವಿವಿಧ ಮಠಗಳಿಗೆ ಮುಖ್ಯಮಂತ್ರಿ ಪುತ್ರ, ಬಿಜೆಪಿ ನಾಯಕ ಬಿ.ವೈ.ವಿಜಯೇಂದ್ರ ಭೇಟಿ‌ ನೀಡಿ ಮಠಾಧೀಶರ ಜೊತೆಗೆ ಸಮಾಲೋಚನೆ ನಡೆಸಿರುವ ವಿಚಾರ ತಡವಾಗಿ ಬೆಳಕಿಗೆ ಬಂದಿದೆ.

Advertisement

ರಾಜ್ಯದಲ್ಲಿ ನಾಯಕತ್ವ ಬದಲಾವಣೆ, ಬಿಜೆಪಿಯೊಳಗೆ ನಡೆಯುತ್ತಿರುವ ಆಂತರಿಕ ಬೇಗುದಿ ಹಿನ್ನೆಲೆಯಲ್ಲಿ ಬುಧವಾರ ಜಿಲ್ಲೆಯ ಮಠಾಧೀಶರನ್ನು ವಿಜಯೇಂದ್ರ ಭೇಟಿ ಮಾಡಿರುವುದು ಚರ್ಚೆಗೆ ಗ್ರಾಸವಾಗಿದೆ.

ಚಿತ್ರದುರ್ಗದ ಮುರುಘಾಮಠಕ್ಕೆ ಭೇಟಿ ನೀಡಿದ ವಿಜಯೇಂದ್ರ ಡಾ.ಶ್ರಿ.ಶಿವಮೂರ್ತಿ ಮುರುಘಾ ಶರಣರು ಸೇರಿದಂತೆ ಹಲವು ಮಠಾಧೀಶರ ಜೊತೆಗೆ ಮಾತುಕತೆ ನಡೆಸಿದ್ದಾರೆ.  ಇಲ್ಲಿಂದ ಶಿವಶರಣ ಮಾದಾರ ಚನ್ನಯ್ಯ ಮಠಕ್ಕೆ ಭೇಟಿ ನೀಡಿ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ, ಆನಂತರ ಸಿರಿಗೆರೆ ಗ್ರಾಮದ ತರಳಬಾಳು ಮಠಕ್ಕೆ ಭೇಟಿ ಡಾ.ಶಿವಮೂರ್ತಿ ಶಿವಾಚಾರ್ಯ ಶ್ರೀಗಳ ಜತೆ ಸಮಾಲೋಚನೆ ನಡೆಸಿದ್ದಾರೆ.

ಭಗೀರಥ ಪೀಠದ ಶ್ರಿ ಪುರುಷೋತ್ತಮಾನಂದಪುರಿ ಸ್ವಾಮೀಜಿ, ಭೋವಿ ಮಠದ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಮಡಿವಾಳ ಮಾಚಿದೇ ಸ್ವಾಮೀಜಿ, ಬಸವಪ್ರಭು ಸ್ವಾಮೀಜಿ, ಕೇತೇಶ್ವರ ಸ್ವಾಮೀಜಿ, ಬಸವನಾಗೀದೇವ ಸ್ವಾಮೀಜಿ, ಬಸವಕುಮಾರ ಸ್ವಾಮೀಜಿ  ಸೇರಿದಂತೆ ವಿವಿಧ ಮಠಾಧೀಶರನ್ನು ಭೇಟಿಯಾಗಿದ್ದಾರೆ.‌ ಈ ವೇಳೆ ರಾಜ್ಯ ಖನಿಜ ನಿಗಮದ ಅಧ್ಯಕ್ಷ ಎಸ್. ಲಿಂಗಮೂರ್ತಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next