Advertisement

B.Y. Vijayendra “ಅಭ್ಯರ್ಥಿ ಇನ್ನೂ ತೀರ್ಮಾನ ಆಗಿಲ್ಲ’; ನಾಡಿದ್ದು ದಿಲ್ಲಿಗೆ ತೆರಳಿ ಚರ್ಚೆ

12:02 AM Jun 24, 2024 | Team Udayavani |

ಮೈಸೂರು: ಚನ್ನಪಟ್ಟಣ ಉಪ ಚುನಾವಣೆ ಸಂಬಂಧ ಬುಧವಾರ ದಿಲ್ಲಿಗೆ ತೆರಳಿ ಹೈಕಮಾಂಡ್‌ ಜತೆ ಚರ್ಚಿಸುತ್ತೇನೆ. ಜೆಡಿಎಸ್‌ಗೆ ಸೀಟು ಬಿಟ್ಟು ಕೊಡುವ ಅಥವಾ ತೆಗೆದುಕೊಳ್ಳುವ ಬಗ್ಗೆ ಇನ್ನೂ ಯಾವುದೇ ತೀರ್ಮಾನ ಆಗಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸುದ್ದಿಗಾರರಿಗೆ ತಿಳಿಸಿದರು.

Advertisement

ಈ ವಿಚಾರದಲ್ಲಿ ಜೆಡಿಎಸ್‌ ಮತ್ತು ಬಿಜೆಪಿ ಒಟ್ಟಾಗಿ ಚರ್ಚಿಸುತ್ತೇವೆ. ಸಿ.ಪಿ. ಯೋಗೇಶ್ವರ್‌ ಅವರನ್ನೂ ಕರೆದು ಮಾತನಾಡುತ್ತೇನೆ.ಕಾಂಗ್ರೆಸ್‌ನಿಂದ ಯಾರೇ ಸ್ಪರ್ಧಿಸಿದರೂ ಅದು ಅವರಿಗೆ ಬಿಟ್ಟದ್ದು. ಜನ ಮನಸ್ಸು ಮಾಡಿದರೆ ಎಂತಹ ಫ‌ಲಿತಾಂಶ ಬರುತ್ತದೆ ಎಂಬುದಕ್ಕೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಫ‌ಲಿತಾಂಶವೇ ಸಾಕ್ಷಿ. ಯಾರು ಎಷ್ಟು ಬಲಾಡ್ಯರು ಎಂದುಕೊಂಡರೂ ಜನರ ತೀರ್ಮಾನವೇ ಅಂತಿಮ ಎಂದರು.

ವಿಧಾನ ಪರಿಷತ್‌ ಸದಸ್ಯ ಸೂರಜ್‌ ರೇವಣ್ಣ ಬಂಧನ ಕುರಿತು ಪ್ರತಿಕ್ರಿಯಿಸಲು ನಿರಾಕರಿಸಿದರು.

ಡಿಕೆಶಿ ಆಟ ನಡೆಯದು: ಬಿ.ವೈ. ವಿಜಯೇಂದ್ರ
ಮೈಸೂರು: ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆ ವಿಚಾರದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್‌ ತಂತ್ರ ಮಾಡುತ್ತಿದ್ದಾರೋ ಅಥವಾ ಕುತಂತ್ರ ಮಾಡುತ್ತಿದ್ದಾರೋ ಗೊತ್ತಿಲ್ಲ. ಉಪ ಚುನಾವಣೆಯಲ್ಲಿ ಅವರ ಆಟವೇನೂ ನಡೆಯದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ಲೋಕಸಭಾ ಚುನಾವಣೆ ಫ‌ಲಿತಾಂಶದಲ್ಲೇ ಕಾಂಗ್ರೆಸ್‌ ಬಂಡವಾಳ ಬಯಲಾಗಿದೆ. ಕರ್ನಾಟಕದಲ್ಲಿ ಕಾಂಗ್ರೆಸ್‌ನ ಒಬ್ಬರೇ ಸಂಸದರು ಇದ್ದರು; ಈಗ 9 ಸಂಸದರು ಇದ್ದಾರೆ ಎಂಬ ಮುಖ್ಯಮಂತ್ರಿ ಹೇಳಿಕೆಗೆ, ರಾಜ್ಯದ 146 ವಿಧಾನಸಭಾ ಕ್ಷೇತ್ರಗಳಲ್ಲಿ ಮೈತ್ರಿ ಪಕ್ಷಕ್ಕೆ ಲೀಡ್‌ ಬಂದಿದೆ. ಮುಖ್ಯಮಂತ್ರಿಗಳು ಇದನ್ನೂ ನೆನಪಿನಲ್ಲಿ ಇಟ್ಟುಕೊಳ್ಳಬೇಕು ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next