Advertisement

ಅಮಿತ್ ಶಾ ಭೇಟಿಯಾದ ವಿಜಯೇಂದ್ರ; ಕುತೂಹಲ ಮೂಡಿಸಿದ ಮಾತುಕತೆ

03:27 PM Jul 20, 2023 | Team Udayavani |

ಹೊಸದಿಲ್ಲಿ: ಮಹತ್ವದ ರಾಜಕೀಯ ವಿದ್ಯಮಾನದಲ್ಲಿ ಗೃಹ ಸಚಿವ ಅಮಿತ್ ಶಾ ಅವರನ್ನು ಗುರುವಾರ ಬಿಜೆಪಿ ಶಾಸಕ ಬಿ.ವೈ. ವಿಜಯೇಂದ್ರ ಅವರು ಭೇಟಿಯಾಗಿ ಮಾತುಕಥೆ ನಡೆಸಿದ್ದಾರೆ.

Advertisement

”ಸಂಘಟನಾ ಚಾತುರ್ಯದ ಚಾಣಕ್ಯನೆಂದೇ ಬಣ್ಣಿಸಲ್ಪಡುವ ಮಾನ್ಯ ಗೃಹ ಸಚಿವ ಅಮಿತ್ ಶಾ ಜೀ ಅವರನ್ನು ಭೇಟಿಮಾಡಲಾಯಿತು. ರಾಜ್ಯದಲ್ಲಿ ವೈಫಲ್ಯದ ಗ್ಯಾರಂಟಿ ಬೆನ್ನಿಗಂಟಿಸಿಕೊಂಡಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಡಲು ಹಾಗೂ ಮುಂದಿನ ಲೋಕಸಭಾ ಚುನಾವಣೆಗೆ ಕಾರ್ಯಕರ್ತರನ್ನು ಸಜ್ಜುಗೊಳಿಸುವ ಕುರಿತು ಮಾರ್ಗದರ್ಶನ ಪಡೆಯಲಾಯಿತು.” ಎಂದು ವಿಜಯೇಂದ್ರ ಟ್ವೀಟ್ ಮಾಡಿದ್ದಾರೆ.

ಕುತೂಹಲ ಮೂಡಿಸಿದ ಭೇಟಿ

ವಿಧಾನಸಭಾ ಚುನಾವಣೆಯಲ್ಲಿ ಬಿ.ಎಸ್. ಯಡಿಯೂರಪ್ಪ ಅವರನ್ನು ಬಿಜೆಪಿ ನಾಯಕರು ಕಡೆಗಣಿಸಿದುದರ ಪರಿಣಾಮವಾಗಿಯೇ ಸೋಲಾಯಿತು ಎಂದು ಬಿಜೆಪಿ ನಾಯಕರು ಬಹಿರಂಗ ಹೇಳಿಕೆ ನೀಡಿದ್ದು, ಇನ್ನೂ ವಿಪಕ್ಷ ನಾಯಕನ ಆಯ್ಕೆ ಮಾಡಲು ಸಾಧ್ಯವಾಗಿಲ್ಲ. ಇನ್ನೊಂದೆಡೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ನೇಮಕವೂ ಆಗಿಲ್ಲ. ಯಡಿಯೂರಪ್ಪ ಅವರ ಮತಬ್ಯಾಂಕ್ ಮರಳಿ ಪಡೆಯಲು ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯನ್ನು ವಿಜಯೇಂದ್ರ ನಾಯಕತ್ವದಲ್ಲಿ ಎದುರಿಸಲು ಬಿಜೆಪಿ ರಣತಂತ್ರ ಹಣೆಯುತ್ತಿದೆ ಎಂಬ ಕುರಿತೂ ರಾಜಕೀಯ ವಲಯಗಳಲ್ಲಿ ಚರ್ಚೆಗಳು ಆರಂಭವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next