Advertisement

B. Y. Vijayendra ಹಿಂದೂಗಳ ತೇಜೋವಧೆ ಮಾಡಿರುವ ರಾಹುಲ್‌ ಕ್ಷಮೆ ಕೇಳಲಿ

09:13 PM Jul 02, 2024 | Team Udayavani |

ಬೆಂಗಳೂರು: ಮೊದಲ ಬಾರಿಗೆ ವಿಪಕ್ಷ ನಾಯಕನಾಗಿ ನೇಮಕಗೊಂಡಿರುವ ರಾಹುಲ್‌ ಗಾಂಧಿಯವರಿಗೆ ಸಂಸತ್ತಿನಲ್ಲಿ ಹೇಗೆ ವರ್ತಿಸಬೇಕೆಂಬ ಬಗ್ಗೆ ಕಾಂಗ್ರೆಸ್‌ನ ಹಿರಿಯರು ಹೇಳಿಕೊಡಲಿ. ಹಿಂದೂಗಳ ತೇಜೋವಧೆ ಮಾಡಿರುವ ರಾಹುಲ್‌ ದೇಶದ ಜನತೆಯ ಕ್ಷಮೆ ಯಾಚಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದ್ದಾರೆ.

Advertisement

ಸತತ 3 ಬಾರಿ ಪ್ರಯತ್ನ ನಡೆಸಿಯೂ ಕಾಂಗ್ರೆಸ್‌ ಪಕ್ಷವನ್ನು ಅಧಿಕಾರಕ್ಕೆ ತರಲಾಗದ ರಾಹುಲ್‌ ವಿಫ‌ಲ ನಾಯಕ. ಇದೇ ಮೊದಲ ಬಾರಿಗೆ ವಿಪಕ್ಷ ನಾಯಕನ ಸ್ಥಾನ ಲಭಿಸಿದೆ. ವಿಪಕ್ಷ ನಾಯಕನಾಗಿ ಸಂಸತ್ತಿನಲ್ಲಿ ಮಾಡಿದ ಚೊಚ್ಚಲ ಭಾಷಣ ಸುಳ್ಳು, ನಿರಾಶೆ, ಆಧಾರರಹಿತ ಆರೋಪಗಳಿಂದ ಕೂಡಿದೆ ಎಂದು ಟೀಕಿಸಿದರು.

ಹಿಂದೂಗಳು ಹಿಂಸಾಚಾರ ಮತ್ತು ದ್ವೇಷದಲ್ಲಿ ಹಗಲಿರುಳು ನಿರತರು ಎಂಬ ಮಾತನ್ನು ಹೇಳುವ ಮೂಲಕ ರಾಹುಲ್‌ ದೇಶದ ಅಸಂಖ್ಯಾಕ ಹಿಂದೂಗಳಿಗೆ ಅವಮಾನ ಮಾಡಿದ್ದಾರೆ, ತೇಜೋವಧೆ ಮಾಡಿದ್ದಾರೆ. ಅದೂ ಸಾಲದೆಂಬಂತೆ ಅಗ್ನಿವೀರ್‌, ರೈತರ ಬಗ್ಗೆ, ಅಯೋಧ್ಯೆ ವಿಚಾರ ಮಾತ್ರವಲ್ಲದೆ, ಮೈಕ್ರೋಫೋನ್‌ ಬಗ್ಗೆ ಸುಳ್ಳು ಹೇಳಿಕೆ ನೀಡಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next