Advertisement

ಯಾವ ಸವಾಲಿಗೂ ಸೈ..:  ವರುಣಾದತ್ತ ಬಿ.ವೈ ವಿಜಯೇಂದ್ರ ಚಿತ್ತ

01:50 PM Dec 11, 2022 | Team Udayavani |

ಮೈಸೂರು:‌ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಮುಂದಿನ ಚುನಾವಣೆಯಲ್ಲಿ ವರುಣ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವ ಬಗ್ಗೆ ಪರೋಕ್ಷವಾಗಿ ಇಚ್ಛೆ ವ್ಯಕ್ತಪಡಿಸಿದ್ದಾರೆ. ಇಂದು ಮೈಸೂರಿಗೆ ಭೇಟಿ ನೀಡಿದ ಬಿ.ವೈ ವಿಜಯೇಂದ್ರಗೆ ಬೆಂಬಲಿಗರು ಭರ್ಜರಿ ಸ್ವಾಗತ ನೀಡಿದ್ದಾರೆ.

Advertisement

ಪಟಾಕಿ ಸಿಡಿಸಿ ಸ್ವಾಗತಿಸಿದ ಅಭಿಮಾನಿಗಳು, ‘ರಾಜಾಹುಲಿಗೆ ಜೈ’ ಎಂದು ಘೋಷಣೆ ಕೂಗಿದ್ದಾರೆ. ಅಲ್ಲದೆ, ‘ಮುಂದಿನ ಮುಖ್ಯಮಂತ್ರಿ ವಿಜಯೇಂದ್ರ’ ಎಂದು ಘೋಷಣೆ ಕೂಗಿದ್ದಾರೆ.

ಸಿದ್ದರಾಮಯ್ಯನವರ ವಿರುದ್ಧ ವರುಣ ಕ್ಷೇತ್ರದಲ್ಲಿ‌ ಸ್ಪರ್ಧೆ ಮಾಡುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ವಿಜಯೇಂದ್ರ, “ಪಕ್ಷ ನನಗೆ ಯಾವುದೇ ಸವಾಲು ಕೊಟ್ಟರೂ ಅದನ್ನು ನಿಭಾಯಿಸುತ್ತೇನೆ. ಪಕ್ಷದ ತೀರ್ಮಾನವೇ ಅಂತಿಮ. ಎಲ್ಲಾ ಸವಾಲುಗಳನ್ನು ನಾನು ಎದುರಿಸುತ್ತೇನೆ” ಎಂದು ಪರೋಕ್ಷವಾಗಿ ವರುಣ ಕ್ಷೇತ್ರದ ಸ್ಪರ್ಧೆಯ ಬಗ್ಗೆ ಇಚ್ಛೆ ವ್ಯಕ್ತಪಡಿಸಿದರು.

ಇದನ್ನೂ ಓದಿ:ಲ್ಯಾಬ್ರಡಾರ್ ರಿಟ್ರೈವರ್ ನಾಯಿಗೆ ಈ ಹೆಸರು ಬರುವ ಹಿಂದಿದೆ ಕೂತೂಹಲಕಾರಿ ಕಥೆ !

ವರುಣ ಮಾತ್ರವಲ್ಲ ಎಲ್ಲಾ ಕ್ಷೇತ್ರಗಳಲ್ಲೂ ಸಂಘಟನೆ ಮಾಡುತ್ತಿದ್ದೇನೆ. ಹಳೇ ಮೈಸೂರು ಭಾಗದಲ್ಲಿ ಹೆಚ್ಚು ಸ್ಥಾನ ಪಡೆಯಲು ಹೋರಾಟ ಮಾಡುತ್ತಿದ್ದೇವೆ. ಹೀಗಾಗಿ ಇಲ್ಲಿಯೇ ಸಂಘಟನೆ ಹೆಚ್ಚು ಮಾಡಿದ್ದೇವೆ ಎಂದರು.

Advertisement

ಮೋದಿ ಎಂಬುದು ಬರೀ ಅಲೆ ಅಲ್ಲ, ಅದೊಂದು ಸುನಾಮಿ. ಕಾಂಗ್ರೆಸ್ ನವರಿಗೆ ಇದು ಇನ್ನೂ ಅರ್ಥವಾಗಿಲ್ಲ. ಕಾಂಗ್ರೆಸ್ ಭ್ರಮೆಯಲ್ಲಿದೆ. ಇದರ ಕಾರಣ ಗುಜರಾತ್ ಫಲಿತಾಂಶದ ಎಫೆಕ್ಟ್ ಕರ್ನಾಟಕದಲ್ಲಿ ಆಗಲ್ಲ ಎಂದು ಹೇಳುತ್ತಿದೆ. ಚುನಾವಣೆ ನಂತರ ಕಾಂಗ್ರೆಸ್ ಗೆ ಉತ್ತರ‌ ಸಿಗಲಿದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next