Advertisement

ಭದ್ರಾವತಿ‌ ಕಾಂಗ್ರೆಸ್ ನ ಗೂಂಡಾ ಸಂಸ್ಕೃತಿಗೆ ಇತಿಶ್ರೀ ಹಾಡಬೇಕಿದೆ: ಬಿ.ವೈ.ವಿಜಯೇಂದ್ರ

01:32 PM Mar 15, 2021 | Team Udayavani |

ಶಿವಮೊಗ್ಗ: ಭದ್ರಾವತಿ ಕಬ್ಬಡಿ ಪಂದ್ಯಾವಳಿ ವೇಳೆ ನಡೆದ ಗಲಾಟೆಯಲ್ಲಿ ಗಾಯಗೊಂಡಿರುವ ಬಿಜೆಪಿ ಕಾರ್ಯಕರ್ತರ ಮನೆಗೆ ಇಂದು ಬಿ ವೈ ವಿಜಯೇಂದ್ರ ಭೇಟಿ ನೀಡಿದರು.

Advertisement

ಭದ್ರಾವತಿಗೆ ಆಗಮಿಸಿದ ವಿಜಯೇಂದ್ರಗೆ ಮಹಿಳೆಯರು‌ ಆರತಿ ಎತ್ತಿ ಸ್ವಾಗತಿಸಿದರು. ಈ ವೇಳೆ ಕಾರ್ಯಕರ್ತರೊಂದಿಗೆ ಮಾತನಾಡಿದ ಅವರು ಧೈರ್ಯ ತುಂಬಿದರು. ಭದ್ರಾವತಿಯಲ್ಲಿನ‌ ಕಾಂಗ್ರೆಸ್ ನ ಗೂಂಡಾ ಸಂಸ್ಕೃತಿಗೆ ಇತಿಶ್ರೀ ಹಾಡಬೇಕಿದೆ ಎಂದು ಗುಡುಗಿದರು.

ಇದನ್ನೂ ಓದಿ:ತಾತ್ಕಾಲಿಕ ಧರಣಿ ಹಿಂಪಡೆದ ಪಂಚಮಸಾಲಿ ಸಮುದಾಯದ ಹೋರಾಟಗಾರರು

ಎರಡು ದಿನದ ಹಿಂದಷ್ಟೇ ಭದ್ರಾವತಿ ಶಾಸಕ ಸಂಗಮೇಶ್ ಹಾಗೂ ಅವರ ಕುಟುಂಬದವರ ಮೇಲೆ ಸುಳ್ಳು ಪ್ರಕರಣ ದಾಖಲಿಸಲಾಗಿದೆ ಎಂದು ಆರೋಪಿಸಿ ಶಿವಮೊಗ್ಗದಲ್ಲಿ ಕಾಂಗ್ರೆಸ್ ನಿಂದ ಭಾರಿ ಜನಾಕ್ರೋಶದ ಪ್ರತಿಭಟನೆ ನಡೆಸಲಾಗಿತ್ತು.

ಇದನ್ನೂ ಓದಿ: ಸಿ.ಡಿ ಪ್ರಕರಣದ ಪ್ರೊಡ್ಯೂಸರ್, ಡೈರಕ್ಟರ್, ಆ್ಯಕ್ಟರ್ ಯಾರೆಂದು ಗೊತ್ತಾಗಲಿದೆ: ಸಿ.ಟಿ ರವಿ

Advertisement

Advertisement

Udayavani is now on Telegram. Click here to join our channel and stay updated with the latest news.

Next