Advertisement

ಪತ್ನಿಯನ್ನು ಬಲೆಗೆ ಬೀಳಿಸಿಕೊಂಡ ಬಾಬಾ: ಮನನೊಂದ ಪತಿ ಆತ್ಮಹತ್ಯೆ

06:52 PM Apr 29, 2022 | Team Udayavani |

ಗುಂಡ್ಲುಪೇಟೆ(ಚಾಮರಾಜನಗರ): ಮೈಸೂರಿನ ಖುರ್ರಾಂ ಪಾಷಾ ಎಂಬ ಬಾಬಾನ ಬಳಿ ಚಿಕಿತ್ಸೆ ಪಡೆಯಲು ಹೋಗುತ್ತಿದ್ದ ಗೃಹಿ ಣಿಯನ್ನು ಪುಸಲಾಯಿಸಿ ಬಲೆಗೆ ಬೀಳಿಸಿಕೊಂಡ ಹಿನ್ನೆಲೆ ಮನನೊಂದು ಪತಿ ನೇಣಿಗೆ ಶರಣಾಗಿರುವ ಘಟನೆ ಪಟ್ಟಣದಲ್ಲಿ ನಡೆದಿದೆ.

Advertisement

ಪಟ್ಟಣದ ಮಹಮದ್ ಅಫ್ಘಾನ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿಯಾಗಿದ್ದು, ಈತ ತನ್ನ ಪತ್ನಿ ತಾನ್ಜೇನಿಯಾ ಕೌಸರ್ ಳನ್ನು ಮೈಸೂರಿನ ಬಾಬಾ ಖುರ್ರಾಂ ಪಾಷಾ ಬಳಿ ಚಿಕಿತ್ಸೆ ಕೊಡಿಸಲು ಕರೆದೊಯ್ಯುತ್ತಿದ್ದ ಎನ್ನಲಾಗಿದೆ. ಈ ಸಂದರ್ಭದಲ್ಲಿ ಬಾಬಾ ಖುರ್ರಾಂ ಪಾಷಾ ಮತ್ತು ಈತನ ಇಬ್ಬರು ಸಹಚರರು ತಾನ್ಜೇನಿಯಾ ಕೌಸರ್ ತಲೆ ಕೆಡಿಸಿ ಬಲೆಗೆ ಬೀಳಿಸಿಕೊಂಡಿದ್ದಾರೆ. ಇದರಿಂದ ಮನನೊಂದ ಮಹಮದ್ ಅಫ್ಘಾನ್ ಶುಕ್ರವಾರ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಸಂಬಂಧ ಡೆತ್ ನೋಟ್ ಕೂಡ ಬರೆದಿಟ್ಟಿದ್ದಾರೆ.

ನನ್ನ ಸಾವಿಗೆ ಮೈಸೂರಿನ ಡೋಂಗಿ ಬಾಬಾ ಖುರ್ರಾಂ ಪಾಷಾ ಮತ್ತು ಈತನ ಇಬ್ಬರು ಸಹಚರರು ಕಾರಣ. ನನ್ನ ಪತ್ನಿಯ ತಲೆ ಕೆಡಿಸಿ ಡೋಂಗಿ ಬಾಬಾಗೆ ತಲೆಹಿಡಿದಿದ್ದಾರೆ. ಇವರನ್ನ ಯಾವುದೇ ಕಾರಣಕ್ಕೂ ಬಿಡಬೇಡಿ ಎಂದು ಬರೆದು ಸಹಿ ಮಾಡಿ ನೇಣು ಹಾಕಿಕೊಂಡಿದ್ಧಾರೆ. ಈ ಸಂಬಂಧ ಮೃತನ ಸಂಬಂಧಿಕರು ದೂರು ನೀಡಿದ್ದಾರೆ. ಈ ಕುರಿತು ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next