Advertisement

Baba Siddique;ಪ್ರಕರಣ ರಾಜಕೀಯಗೊಳಿಸಬೇಡಿ: ನ್ಯಾಯಬೇಕು ಎಂದ ಪುತ್ರ

08:45 PM Oct 17, 2024 | Team Udayavani |

ಮುಂಬಯಿ: ಎನ್ ಸಿಪಿ(ಅಜಿತ್ ಪವಾರ್)ಬಣದ ನಾಯಕ ಬಾಬಾ ಸಿದ್ದಿಕಿ ಅವರ ಹತ್ಯೆ ಪ್ರಕರಣವನ್ನು ರಾಜಕೀಯಗೊಳಿಸಬೇಡಿ, ನಮ್ಮ ಕುಟುಂಬಕ್ಕೆ ನ್ಯಾಯ ಸಿಗಬೇಕಾಗಿದೆ ಎಂದು ಪುತ್ರ, ಬಾಂದ್ರಾ ಪೂರ್ವ ಕ್ಷೇತ್ರದ ಕಾಂಗ್ರೆಸ್ ಶಾಸಕ ಜೀಶಾನ್ ಸಿದ್ದಿಕಿ ಗುರುವಾರ(ಅ17) ಹೇಳಿಕೆ ನೀಡಿದ್ದಾರೆ.

Advertisement

ಚುನಾವಣೆ ವೇಳೆ ಮಹಾರಾಷ್ಟ್ರ ಸರಕಾರದ ವಿರುದ್ಧ ತೀವ್ರ ರಾಜಕೀಯ ಪ್ರಹಾರಕ್ಕೆ ಪ್ರಕರಣ ಬಳಕೆಯಾಗುತ್ತಿರುವ ವೇಳೆಯಲ್ಲೇ ಎಕ್ಸ್ ಪೋಸ್ಟ್ ಮಾಡಿರುವ ಜೀಶಾನ್ ಸಿದ್ದಿಕಿ ”ಬಡ ಮುಗ್ಧ ಜನರ ಜೀವ, ಮನೆಗಳನ್ನು ರಕ್ಷಿಸಲು ಮತ್ತು ಉಳಿಸಲು ನನ್ನ ತಂದೆ ತನ್ನ ಪ್ರಾಣವನ್ನು ಕಳೆದುಕೊಂಡರು. ಇಂದು, ನನ್ನ ಕುಟುಂಬವು ಒಡೆದುಹೋಗಿದೆ. ಸಾವನ್ನು ರಾಜಕೀಯಗೊಳಿಸಬಾರದು ಮತ್ತು ಖಂಡಿತವಾಗಿಯೂ ಅದು ವ್ಯರ್ಥವಾಗಬಾರದು. ನನಗೆ ನ್ಯಾಯ ಬೇಕು, ನನ್ನ ಕುಟುಂಬಕ್ಕೆ ನ್ಯಾಯ ಬೇಕು!” ಎಂದು ಭಾವನಾತ್ಮಕ ಮನವಿ ಮಾಡಿದ್ದಾರೆ.

ಅಕ್ಟೋಬರ್ 12 ರಂದು ಮುಂಬೈನ ಬಾಂದ್ರಾದ ನಿರ್ಮಲ್ ನಗರದಲ್ಲಿ ಮಾಜಿ ಸಚಿವ ಬಾಬಾ ಸಿದ್ದಿಕಿ (66) ಮೇಲೆ ಮೂವರು ದುಷ್ಕರ್ಮಿಗಳು ಗುಂಡು ಹಾರಿಸಿದ್ದರು. ತೀವ್ರ ಗಾಯಗೊಂಡಿದ್ದ ಅವರು ಸಮೀಪದ ಲೀಲಾವತಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು.

ಬಾಬಾ ಸಿದ್ದಿಕಿ ಅವರು ಇತ್ತೀಚೆಗೆ ಕಾಂಗ್ರೆಸ್‌ನಿಂದ ಅಜಿತ್ ಪವಾರ್ ನೇತೃತ್ವದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದರು. ಈಗ ಪುತ್ರ ತಮ್ಮ ಮುಂದಿನ ರಾಜಕೀಯ ನಿರ್ಧಾರ ಏನು ಕೈಗೊಳ್ಳುತ್ತಾರೆ ಎಂದು ಕಾದು ನೋಡಬೇಕಿದೆ.

Advertisement

ಹತ್ಯೆ ಪ್ರಕರಣವನ್ನು ಕಾಂಗ್ರೆಸ್, ಶರದ್ ಪವಾರ್ ಅವರ ಎನ್ ಸಿಪಿ, ಉದ್ಧವ್ ಠಾಕ್ರೆ ಅವರ ಶಿವಸೇನೆ ರಾಜ್ಯ ಸರಕಾರದ ಬಗ್ಗೆ ತೀವ್ರ ಟೀಕಾ ಪ್ರಹಾರ ನಡೆಸಲು ಬಳಸಿಕೊಂಡಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದಕ್ಕೆ ಸಾಕ್ಷಿ ಎಂದು ಕರೆದಿವೆ.

Advertisement

Udayavani is now on Telegram. Click here to join our channel and stay updated with the latest news.

Next