Advertisement

Baba Siddique Case: ಹರ್ಯಾಣದಲ್ಲಿ ಇನ್ನೋರ್ವ ಆರೋಪಿ ಬಂಧನ, ಬಂಧಿತರ ಸಂಖ್ಯೆ 11ಕ್ಕೆ ಏರಿಕೆ

04:25 PM Oct 23, 2024 | Team Udayavani |

ಮುಂಬೈ: ಎನ್‌ಸಿಪಿ ನಾಯಕ ಬಾಬಾ ಸಿದ್ದಿಕ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಇನ್ನೋರ್ವ ವ್ಯಕ್ತಿಯನ್ನು ಬುಧವಾರ(ಅ.23) ಬಂಧಿಸಿದ್ದು ಇದರೊಂದಿಗೆ ಸಿದ್ದಿಕಿ ಹತ್ಯೆ ಪ್ರಕರಣದಲ್ಲಿ ಬಂಧಿತರಾದವರ ಸಂಖ್ಯೆ ಹನ್ನೊಂದಕ್ಕೆ ಏರಿಕೆಯಾಗಿದೆ.

Advertisement

ಹರಿಯಾಣದ ಕೈತಾಲ್‌ನ ನಥ್ವಾನ್ ಪಟ್ಟಿ ನಿವಾಸಿ ಅಮಿತ್ ಹಿಸಾಮಸಿಂಗ್ ಕುಮಾರ್(29) ಎಂಬಾತನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.

ಅಕ್ಟೋಬರ್ 12 ರಂದು ಎನ್‌ಸಿಪಿ ನಾಯಕ ಬಾಬಾ ಸಿದ್ದಿಕ್ ಅವರನ್ನು ಪುತ್ರನ ಕಚೇರಿ ಬಳಿಯೇ ಗುಂಡಿಕ್ಕಿ ಹತ್ಯೆಗೈಯ್ಯಲಾಗಿತ್ತು ಈ ಪ್ರಕರಣಕ್ಕೆ ಸಂಬಂಧಿಸಿ ಗುರ್ಮೈಲ್ ಬಲ್ಜಿತ್ ಸಿಂಗ್ (23) ಮತ್ತು ಧರ್ಮರಾಜ್ ರಾಜೇಶ್ ಕಶ್ಯಪ್ (19) ಎಂಬ ಇಬ್ಬರು ಶೂಟರ್‌ಗಳು ಸೇರಿದಂತೆ ಈಗಾಗಲೇ ಹತ್ತು ಮಂದಿಯನ್ನು ಬಂಧಿಸಲಾಗಿತ್ತು ಇಂದು (ಬುಧವಾರ) ಇನ್ನೋರ್ವ ಆರೋಪಿಯನ್ನು ಹರ್ಯಾಣದಲ್ಲಿ ಬಂಧಿಸಿದ್ದಾರೆ.

ಇದನ್ನೂ ಓದಿ: Toxic Movie: ‘ಟಾಕ್ಸಿಕ್ʼ ರಿಲೀಸ್‌ ಡೇಟ್‌ ಮುಂದೂಡಿಕೆ ಅಧಿಕೃತ; ಯಶ್‌ ಹೇಳಿದ್ದೇನು?

Advertisement

Udayavani is now on Telegram. Click here to join our channel and stay updated with the latest news.

Next