Advertisement

ಬಾಬರಿ ಮಸೀದಿ: 6 ತಿಂಗಳ ಕಾಲಾವಕಾಶ ಕೋರಿದ ಜಡ್ಜ್

01:16 PM Sep 29, 2020 | Team Udayavani |

ಹೊಸದಿಲ್ಲಿ: ಅಯೋಧ್ಯೆಯಲ್ಲಿನ ಬಾಬರಿ ಮಸೀದಿ ಧ್ವಂಸ ಪ್ರಕರಣದ ವಿಚಾರಣೆ ಮುಕ್ತಾಯಗೊಳಿಸಲು ವಿಶೇಷ ನ್ಯಾಯಮೂರ್ತಿ ಸುಪ್ರೀಂಕೋರ್ಟ್‌ನಿಂದ ಆರು ತಿಂಗಳ ಸಮಯಾವಕಾಶ ಕೇಳಿದ್ದಾರೆ.

Advertisement

ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್‌ ನ್ಯಾ| ಆರ್‌.ಎಫ್.ನಾರಿಮನ್‌ ನೇತೃತ್ವದ ನ್ಯಾಯಪೀಠ, ಈ ಬಗ್ಗೆ ಉತ್ತರ ಪ್ರದೇಶ ಸರಕಾರಕ್ಕೆ ಸೂಚನೆ ನೀಡಿದ್ದು, ವಿಶೇಷ ನ್ಯಾಯಮೂರ್ತಿಯ ಅವಧಿಯನ್ನು ಹೇಗೆ ವಿಸ್ತರಿಸಬಹುದು ಎಂಬ ಕುರಿತು ಇದೇ 19ರ ಒಳಗಾಗಿ ಮಾಹಿತಿ ಸಲ್ಲಿಸಬೇಕು ಎಂದು ನಿರ್ದೇಶಿಸಿದೆ.

ಬಿಜೆಪಿಯ ಹಿರಿಯ ನಾಯಕರಾಗಿರುವ ಎಲ್‌.ಕೆ. ಆಡ್ವಾಣಿ, ಎಂ.ಎಂ.ಜೋಶಿ ಮತ್ತು ಇತರರ ವಿರುದ್ಧ ದಾಖಲಾಗಿರುವ ಪ್ರಕರಣ ಇದಾಗಿದೆ. ವಿಶೇಷ ನ್ಯಾಯಮೂರ್ತಿಯು ಮೇನಲ್ಲಿ ಸುಪ್ರೀಕೋರ್ಟ್‌ಗೆ ಪತ್ರ ಬರೆದು ಸೆಪ್ಟಂಬರ್‌ 29ರಂದು ನಿವೃತ್ತಿಯಾಗುತ್ತಿರುವುದಾಗಿ ಹೇಳಿಕೊಂಡಿದ್ದರು. 2017ರ ಎ. 19ರಂದು ನಡೆದಿದ್ದ ವಿಚಾರಣೆ ವೇಳೆ, 1992ರಲ್ಲಿ ನಡೆದಿದ್ದ ಬಾಬರಿ ಮಸೀದಿ ಧ್ವಂಸ ಪ್ರಕರಣದ ವಿಚಾರಣೆ ಪ್ರತಿ ದಿನ ನಡೆದು, ಎರಡು ವರ್ಷಗಳ ಅವಧಿಯಲ್ಲಿ ವಿಚಾರಣೆ ಮುಕ್ತಾಯಗೊಳ್ಳಬೇಕು ಎಂದು ನ್ಯಾಯಾಲಯ ಆದೇಶ ನೀಡಿತ್ತು.

Advertisement

Udayavani is now on Telegram. Click here to join our channel and stay updated with the latest news.

Next