Advertisement

ಬಾಬೂಜಿ ಆದರ್ಶ ಪಾಲಿಸಿ: ಪಾಟೀಲ

03:47 PM Apr 06, 2018 | |

ಭಾಲ್ಕಿ: ದಲಿತರ ಏಳ್ಗೆಗಾಗಿ ಜೀವನವಿಡೀ ಶ್ರಮಿಸಿದ ಡಾ|ಬಾಬು ಜಗಜೀವನರಾಮ್‌ ಅವರ ಆದರ್ಶವನ್ನು ನಾವೆಲ್ಲರೂ ಪಾಲಿಸುವಂತಾಗಬೇಕು ಎಂದು ತಹಶೀಲ್ದಾರ ದಯಾನಂದ ಪಾಟೀಲ ಹೇಳಿದರು. ಪಟ್ಟಣದ ತಹಶೀಲ್ದಾರ ಕಚೇರಿಯಲ್ಲಿ ಗುರುವಾರ ಆಯೋಜಿಸಲಾಗಿದ್ದ ಡಾ| ಬಾಬು ಜಗಜೀವನರಾಮ ಅವರ 111ನೇ ಜಯಂತಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಡಾ| ಬಾಬು ಜಗಜೀವನರಾಮ ಅವರು ಸ್ವಾತಂತ್ರ್ಯ ಹೋರಾಟಗಾರರಾಗಿದ್ದಾರೆ. ಜೀವನವೀಡಿ ದಲಿತರ ಏಳ್ಗೆಗಾಗಿ ಶ್ರಮಿಸಿದ್ದಾರೆ.

Advertisement

ಪ್ರತಿಯೊಬ್ಬ ವ್ಯಕ್ತಿ ತಮ್ಮ ಜಾತಿ ಮೀರಿ ಬೆಳೆಯಬೇಕು ಎನ್ನುವುದು ಅವರ ಆಶಯವಾಗಿತ್ತು. ಸ್ವಾತಂತ್ರ್ಯ ಪೂರ್ವದಲ್ಲಿ ದಲಿತರು, ಸ್ತ್ರೀಯರು, ರೈತರು, ರಾಷ್ಟ್ರೀಯ ಚಳವಳಿಗೆ ಧುಮಕಲು ಕಾರಣರಾದ ಡಾ| ಜಗಜೀವನರಾಮ್‌ ಅವರು 26 ತಿಂಗಳ ಸೆರೆಮನೆ ವಾಸ ಅನುಭವಿಸಿ ದೇಶಕ್ಕೆ ಸ್ವಾತಂತ್ರ್ಯ ತರುವಲ್ಲಿ ಶ್ರಮ ವಹಿಸಿದ್ದರು ಎಂದು ಸ್ಮರಿಸಿದರು.

ಉಪ ತಹಶೀಲ್ದಾರ ರಮೇಶ ಪೆದ್ದೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಂದಾಯ ನಿರೀಕ್ಷಕ ಜ್ಞಾನೇಶ್ವರ ಕಾರಬಾರಿ, ಪ್ರಮುಖರಾದ ಸಿದ್ರಾಮ, ಶಂಕರ ಚವ್ಹಾಣ, ಇಂದುಮತಿ, ಮೀನಾಕ್ಷಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next