Advertisement

ಕಲಬುರಗಿ: ಚುನಾವಣೆ ಪ್ರಚಾರ ಮುಗಿಸಿಕೊಂಡು ಬರುವಾಗ ಶನಿವಾರ ನಗರದ ಹೊರವಲಯದಲ್ಲಿ ಕಾರು ಉರುಳಿ ಬಿದ್ದು ಗಾಯಗೊಂಡು ಚಿಕಿತ್ಸೆಗೆ ಒಳಗಾಗಿದ್ದ ಮಾಜಿ ಸಚಿವ, ಗುರುಮಿಠಕಲ್‌ ಕಾಂಗ್ರೆಸ್‌ ಅಭ್ಯರ್ಥಿ ಬಾಬುರಾವ್‌ ಚಿಂಚನಸೂರ್‌ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ.

Advertisement

ಕಾರು ಉರುಳಿ ಬಿದ್ದ ಪರಿಣಾಮ ಕಾಲಿಗೆ ಗಂಭೀರ ಗಾಯವಾಗಿತ್ತು. ಯುನೈಟೆಡ್‌ ಆಸ್ಪತ್ರೆಯ ವೈದ್ಯರು ಹತ್ತು ಗಂಟೆ ಶಸ್ತ್ರಚಿಕಿತ್ಸೆ ಮಾಡಿದ್ದರು. ಅವರನ್ನು ಐಸಿಯುನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ನಡುವೆ ಗುರುಮಿಠಕಲ್‌ನ ಜೆಡಿಎಸ್‌ ಅಭ್ಯರ್ಥಿ ಶರಣಗೌಡ ಕಂದಕೂರ ಹಾಗೂ ಬಿಜೆಪಿ ಅಭ್ಯರ್ಥಿ ಲಲಿತಾ ಅನಪುರ್‌ ಅವರು ಆಸ್ಪತ್ರೆಗೆ ಭೇಟಿ ನೀಡಿ, ಚಿಂಚನಸೂರ ಪತ್ನಿ ಅಮರೇಶ್ವರಿ ಅವರಿಗೆ ಧೈರ್ಯ ತುಂಬಿದರು. ಚಿಂಚನಸೂರ ಬೇಗ ಗುಣಮುಖರಾಗಲಿ ಎಂದು ಸುಕ್ಷೇತ್ರ ಮೋತಕಪಲ್ಲಿ ಬಲ ಭೀಮಸೇನಾ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ್ದೇನೆ ಎಂದು ಕಂದಕೂರ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next