Advertisement

ಸಕ್ರೆಬೈಲು : ಆನೆ ಬಿಡಾರದಲ್ಲಿರುವ ಮರಿಯಾನೆಗೆ ‘ಪುನೀತ್’ಎಂದು ಹೆಸರಿಟ್ಟ ಅರಣ್ಯ ಇಲಾಖೆ

02:06 PM Nov 10, 2021 | Team Udayavani |

ಶಿವಮೊಗ್ಗ : ಸಕ್ರೆಬೈಲು ಆನೆ ಬಿಡಾರದಲ್ಲಿರುವ ಮರಿಯಾನೆಗೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಎಂದು ನಾಮಕರಣ ಮಾಡುವ ಮೂಲಕ ಅರಣ್ಯ ಇಲಾಖೆ ವಿಶೇಷ ಗೌರವ ಸಲ್ಲಿಸಿದೆ .

Advertisement

ಇಂದು ಸಕ್ರೆಬೈಲು ಆನೆ ಬಿಡಾರದಲ್ಲಿ ನಡೆಯುತ್ತಿರುವ ತಾಯಿ‌ ಆನೆಯಿಂದ ಮರಿಯಾನೆಯನ್ನು ಬೇರ್ಪಡಿಸುವ ವೀನಿಂಗ್ ಕಾರ್ಯಕ್ರಮ ನಡೆದಿದ್ದು ತಾಯಿ ನೇತ್ರಾ ಆನೆಯಿಂದ ಮರಿಯನ್ನು ಇಂದು ಬೇರ್ಪಡಿಸಲಾಗುತ್ತಿದೆ ಈ ವೇಳೆ ಮರಿಯಾನೆಗೆ ಪುನೀತ್ ಹೆಸರಿಟ್ಟು ನಾಮಕರಣ ಮಾಡಲಾಗಿದೆ.

ಎರಡು ತಿಂಗಳ ಹಿಂದೆಯಷ್ಟೇ ಸಕ್ರೆಬೈಲು ಆನೆ ಬಿಡಾರಕ್ಕೆ ಆಗಮಿಸಿದ ನಟ ಪುನೀತ್ ರಾಜ್ ಕುಮಾರ್ ಈ ಮರಿ ಆನೆಯನ್ನು ಮುದ್ದಿಸಿದ್ದರು. ಈ ಹಿನ್ನೆಲೆಯಲ್ಲಿ ಅವರ ಹೆಸರಿಡುವ ಮೂಲಕ ಅರಣ್ಯ ಇಲಾಖೆ ಗೌರವ ಸಲ್ಲಿಸಿದ್ದಾರೆ.

ಇದುವರೆಗೆ ದೇವರ ಹೆಸರು ಹಾಗೂ ಅರಣ್ಯ ಇಲಾಖೆ ಹಿರಿಯ ಅಧಿಕಾರಿಗಳ ಹೆಸರನ್ನು ಮರಿ ಆನೆಗಳಿಗೆ ಇಡಲಾಗುತ್ತಿತ್ತು. ಆದರೆ ಇದೇ ಮೊದಲ ಬಾರಿಗೆ ಮರಿ ಆನೆಗೆ ಚಿತ್ರನಟರೊಬ್ಬರ ಹೆಸರನ್ನು ಇಡಲಾಗುತ್ತಿದೆ ಎನ್ನಲಾಗಿದೆ.

ಇದನ್ನೂ ಓದಿ : ಅಪ್ಪು ಜೊತೆಗಿನ ಫೋಟೋ ಶೇರ್ ಮಾಡಿ ಕಂಬನಿ ಮಿಡಿದ ನಟಿ ರಾಧಿಕಾ ಪಂಡಿತ್

Advertisement
Advertisement

Udayavani is now on Telegram. Click here to join our channel and stay updated with the latest news.

Next