Advertisement

ಮಂಡ್ಯ: ಮಹಡಿಯಿಂದ ಕಾಲು ಜಾರಿ ಬಿದ್ದು ಮಗು ಸಾವು

04:13 PM Oct 06, 2020 | keerthan |

ಮಂಡ್ಯ: ಮಹಡಿಯಿಂದ ಕಾಲು ಜಾರಿ ಬಿದ್ದು ಹೆಣ್ಣು ಮಗುವೊಂದು ಸಾವನ್ನಪ್ಪಿರುವ ಘಟನೆ ನಗರದ ರಾಜಕುಮಾರ್ ಬಡಾವಣೆಯಲ್ಲಿ ನಡೆದಿದೆ.

Advertisement

ಬಡಾವಣೆಯ ಆದಿಶಕ್ತಿ ಮೆಡಿಕಲ್ ಮಾಲೀಕ ಸತೀಶ್ ಹಾಗೂ ಶ್ರುತಿ ಎಂಬ ದಂಪತಿಗೆ ಸೇರಿದ ಹೆಣ್ಣು ಮಗು ಧನುಶ್ರೀ (3) ಮೃತಪಟ್ಟಿದೆ.

ಆಟವಾಡಲು ಮನೆಯ ಮಹಡಿಯ ಮೇಲೆ ಹೋಗಿದ ಸಂದರ್ಭದಲ್ಲಿ ಕಾಲು ಜಾರಿ ಬಿದ್ದು ದುರ್ಘಟನೆ ನಡೆದಿದೆ. ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಆದರೆ ತಲೆಗೆ ತೀವ್ರ ಪೆಟ್ಟು ಬಿದ್ದ ಹಿನ್ನೆಲೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ ಎಂದು ತಿಳಿದು ಬಂದಿದೆ. ಮಗು ಕಳೆದುಕೊಂಡ ಕುಟುಂಬಸ್ಥರಿಂದ ಮುಗಿಲು ಮುಟ್ಟಿದ ಆಕ್ರಂದನ ಮುಗಿಲು ಮುಟ್ಟಿತ್ತು.

ಇದನ್ನೂ ಓದಿ:ಶಿರಾ ಕ್ಷೇತ್ರಕ್ಕೆ ಸತ್ಯನಾರಾಯಣ ಪತ್ನಿ ಅಮ್ಮಾಜಮ್ಮ ಹೆಸರು ಅಂತಿಮಗೊಳಸಿದ ಜೆಡಿಎಸ್

ಸಾಮಾಜಿಕ ಜಾಲತಾಣಗಳಲ್ಲಿ ಜನರು ಬಾಲಕಿಯ ಫೋಟೋ ಹಾಕಿ ಮರುಕ ವ್ಯಕ್ತಪಡಿಸುತ್ತಿರುವ ವಿಡಿಯೋಗಳು ವೈರಲ್ ಆಗಿದೆ. ಜೊತೆಗೆ ಸಂತಾಪ ಸೂಚಿಸುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಯಾವುದೇ ದೂರು ದಾಖಲಾಗಿಲ್ಲ.

Advertisement
Advertisement

Udayavani is now on Telegram. Click here to join our channel and stay updated with the latest news.

Next