Advertisement
ಭಾನುವಾರ ಮಧ್ಯಾಹ್ನ 1.30ಕ್ಕೆ ವೀರಾಂಜನೇಯಸ್ವಾಮಿ ಬೆಳ್ಳಿ ವಿಗ್ರಹ ಹಾಗೂ ರಾಮ ಲಕ್ಷ್ಮಣ ಸೀತೆಯ ಉತ್ಸವಮೂರ್ತಿಯನ್ನು ರಥದಲ್ಲಿ ಪ್ರತಿಷ್ಠಾಪಿಸಿ, ನಂತರ ಪೂಜೆ ಸಲ್ಲಿಸಿ, ಜಾತ್ರಾಮಾಳದಿಂದ ಸಹಸ್ರಾರು ಭಕ್ತರು ಭಕ್ತಿ-ಭಾವದಿಂದ ರಥವನ್ನು ಎಳೆದು ದೇವಸ್ಥಾನದ ಹಿಂಭಾಗಕ್ಕೆ ತಂದು ನಿಲ್ಲಿಸಿದರು.
Related Articles
Advertisement
ಇಂದು ತೆಪ್ಪೋತ್ಸವ: ಸೋಮವಾರ ಬೆಳಗ್ಗೆ 10ಗಂಟೆಗೆ ಗ್ರಾಮದ ಬಳಿಯ ಉದ್ದೂರು ನಾಲೆಯಲ್ಲಿ ವೀರಾಂಜನೇಯಸ್ವಾಮಿ ತೆಪ್ಪೋತ್ಸವ ನಡೆಯಲಿದೆ. ಭಕ್ತರಿಗೆ ನಗರದ ಹನುಮ ಭಕ್ತರು ಮಧ್ಯಾಹ್ನ ಊಟದ ವ್ಯವಸ್ಥೆ ಕಲ್ಪಿಸಿದ್ದರೆ, ನಂದಿ ಟ್ರೇಡರ್ ಹಾಗೂ ಬಾಚಳ್ಳಿಯ ಜನರು ಚಿಕ್ಕಹುಣಸೂರಿನಿಂದ ಜಾತ್ರಾಮಾಳದವರೆಗೆ ಅಲ್ಲಲ್ಲಿ ಮಜ್ಜಿಗೆ-ಪಾನಕ ವಿತರಿಸಿದರು.
ಈ ವೇಳೆ ನಗರಸಭಾಧ್ಯಕ್ಷ ಎಚ್.ವೈ.ಮಹದೇವ್, ಮಾಜಿ ಶಾಸಕ ಎಚ್.ಪಿ.ಮಂಜುನಾಥ್, ಮಾಜಿ ಸಚಿವ ವಿಜಯಶಂಕರ್, ಜಾತ್ರೆ ಸಮಿತಿಯ ಲಕ್ಷ್ಮೀನಾರಾಯಣ, ಕಿಟ್ಟಪ್ಪ, ಸುಂದ್ರಣ್ಣ, ವೃತ್ತ ನಿರೀಕ್ಷಕ ಪೂವಯ್ಯ, ಎಸ್ಐ ಶಿವಪ್ರಕಾಶ್ ಇತರರಿದ್ದರು,.