Advertisement

ಮಾಲಕರೆಡ್ಡಿಯಿಂದ ಅಭಿವೃದ್ಧಿಗೆ ಹಿನ್ನಡೆ

03:58 PM May 07, 2018 | Team Udayavani |

ಯಾದಗಿರಿ: ಮತಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಮುಂಬರುವ ಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕಿ ಸಹಕರಿಸಬೇಕು ಎಂದು ಬಿಜೆಪಿ ಅಭ್ಯರ್ಥಿ ವೆಂಕಟರೆಡ್ಡಿ ಮುದ್ನಾಳ ಮನವಿ ಮಾಡಿದರು.

Advertisement

ಮತಕ್ಷೇತ್ರದ ಹುಲಕಲ್‌ ಗ್ರಾಮದಲ್ಲಿ ನಡೆದ ವಿವಿಧ ಪಕ್ಷಗಳ ಹಲವು ಮುಖಂಡರು ಬಿಜೆಪಿ ಸೇರ್ಪಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕಳೆದ ಹತ್ತು ವರ್ಷಗಳಿಂದ ಕಾಂಗ್ರೆಸ್‌ ಪಕ್ಷದ ಶಾಸಕ ಡಾ| ಎ.ಬಿ. ಮಾಲಕರೆಡ್ಡಿ ಅವರು ಯಾದಗಿರಿ ಮತಕ್ಷೇತ್ರದ ಅಭಿವೃದ್ಧಿ ಕಡೆಗಣಿಸಿದ್ದರಿಂದ ಸಾಕಷ್ಟು ಹಿಂದುಳಿದಿದೆ. ಆದ್ದರಿಂದ ಅಭಿವೃದ್ಧಿಗಾಗಿ ಬಿಜೆಪಿ ಬೆಂಬಲಿಸಬೇಕು ಎಂದರು.

ರಸ್ತೆ, ಕುಡಿವ ನೀರು, ವಿದ್ಯುತ್‌ ಸೇರಿದಂತೆ ಹಲವು ಸಮಸ್ಯೆಗಳು ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳಾದರೂ ಇನ್ನೂ ಹಲವು ಗ್ರಾಮಗಳಲ್ಲಿ ಹಾಗೆ ಉಳಿದಿರುವುದಕ್ಕೆ ಕಾಂಗ್ರೆಸ್‌ ಆಡಳಿತವೇ ಕಾರಣ ಆಎಂದು ಆರೋಪಿಸಿದರು.
 
ಇದೇ ವೇಳೆ ವಿವಿಧ ಪಕ್ಷಗಳ ಮುಖಂಡರಾದ ಬಸಲಿಂಗಪ್ಪ ನಾಯಕ, ದೇವೀಂದ್ರಪ್ಪ ಚೆನ್ನೂರ, ಮಹಾದೇವಪ್ಪ ಪೂಜಾರಿ, ಡಾ| ಹಣಮಂತ ಠಾಣಗುಂದಿ, ಸಣ್ಣ ಬಾಲಪ್ಪ, ಕಾಶೀಂಸಾಬ್‌ ಹೊಟೇಲ್‌ ಬಿಜೆಪಿಗೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಡಾ| ವೀರಬಸವಂತರೆಡ್ಡಿ ಮುದ್ನಾಳ, ಬಿಜೆಪಿ ಮಂಡಳ ಪ್ರಧಾನ ಕಾರ್ಯದರ್ಶಿ ದೊಡಪ್ಪ ನಾಯಕ, ಸಿದ್ದಣಗೌಡ ಕಾಡಂನೂರ, ಶರಣಭೂಪಾಲರಡ್ಡಿ, ಈಶಪ್ಪಗೌಡ, ಸಾಯಿಬಣ್ಣ ಭಜಂತ್ರಿ, ಬಾಲಪ್ಪ ಮುಂಡರಗಿ ಇದ್ದರು. 

Advertisement

Udayavani is now on Telegram. Click here to join our channel and stay updated with the latest news.

Next