Advertisement

ಕ್ರಿಸ್ಮಸ್‌ ಹಿನ್ನೆಲೆ: KSRTC ಯಿಂದ ಹೆಚ್ಚುವರಿ ಬಸ್‌

11:17 PM Dec 19, 2023 | Team Udayavani |

ಬೆಂಗಳೂರು: ಕ್ರಿಸ್ಮಸ್‌ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಸಾವಿರ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಿದೆ.

Advertisement

ಡಿ. 22 ಮತ್ತು 23ರಂದು ಬೆಂಗಳೂರಿನಿಂದ ರಾಜ್ಯ ಮತ್ತು ಅಂತಾರಾಜ್ಯಗಳಿಗೆ ತೆರಳುವ ಹಾಗೂ ಡಿ. 25ರಂದು ನಾನಾ ಭಾಗಗಳಿಂದ ಬೆಂಗಳೂರಿಗೆ ಆಗಮಿಸುವವರ ಅನುಕೂಲಕ್ಕಾಗಿ ಈ ಹೆಚ್ಚುವರಿ ಸಾವಿರ ಬಸ್‌ಗಳು ಕಾರ್ಯಾಚರಣೆ ಮಾಡಲಿವೆ.

691 ಗಣಕೀಕೃತ ಕೌಂಟರ್‌ಗಳನ್ನು ತೆರೆದಿದ್ದು, ಇಲ್ಲಿ ಪ್ರಯಾಣಿಕರು ಮುಂಗಡ ಆಸನ ಕಾಯ್ದಿರಿಸಬಹುದು. ನಾಲ್ಕು ಅಥವಾ ಅದಕ್ಕಿಂತ ಹೆಚ್ಚು ಒಟ್ಟಾಗಿ ಮುಂಗಡ ಟಿಕೆಟ್‌ ಕಾಯ್ದಿರಿಸಿದರೆ ಶೇ. 5ರಷ್ಟು ಮತ್ತು ಹೋಗುವ ಹಾಗೂ ಬರುವ ಟಿಕೆಟ್‌ಗಳನ್ನು ಒಟ್ಟಿಗೆ ಕಾಯ್ದಿರಿಸಿದರೆ ಶೇ. 10ರಷ್ಟು ರಿಯಾಯಿತಿ ದೊರೆಯಲಿದೆ. ಇ-ಟಿಕೆಟ್‌ ಬುಕಿಂಗ್‌ಗೆ KSRTC ವೆಬ್‌ಸೈಟ್‌ ಸಂಪರ್ಕಿಸಬಹುದು ಎಂದು ನಿಗಮದ ಪ್ರಕಟನೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next