Advertisement

CM ಭೇಟಿ ಹಿನ್ನೆಲೆ: ಬಂದೋಬಸ್ತ್‌ನಲ್ಲಿದ್ದ ಸಂಚಾರಿ ಹೆಡ್‌ಕಾನ್‌ಸ್ಟೆಬಲ್‌ಗೆ ಟೆಂಪೊ ಢಿಕ್ಕಿ

09:53 PM Apr 13, 2023 | Team Udayavani |

ಉಳ್ಳಾಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಸೋಮೇಶ್ವರ ಶ್ರೀ ಸೋಮನಾಥ ದೇವಸ್ಥಾನಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿ 66ರ ಕಲ್ಲಾಪು ಆಡಂಕುದ್ರು ಬಳಿ ಬಂದೋಬಸ್ತ್ನಲ್ಲಿದ್ದ ಕಂಕನಾಡಿ ನಗರ ಠಾಣೆಯ ಪೊಲೀಸ್‌ ಹೆಡ್‌ಕಾನ್‌ಸ್ಟೆಬಲ್‌ಗೆ ಟೆಂಪೊ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದು, ನಗರದ ಆಸ್ಪತ್ರೆಯಲ್ಲಿ ಚೇತರಿಸುತ್ತಿದ್ದಾರೆ.

Advertisement

ಹರೇಕಳ ನಿವಾಸಿ ಹೆಡ್‌ಕಾನ್‌ಸ್ಟೆಬಲ್‌ ಮಂಜುನಾಥ್‌ ಹೆಗ್ಡೆ ಗಾಯಗೊಂಡವರು.

ಮುಖ್ಯಮಂತ್ರಿ ವಾಹನ ಬರುವ ಸಂದರ್ಭದಲ್ಲಿ ಹೆದ್ದಾರಿಯನ್ನು ವಾಹನ ಮುಕ್ತಗೊಳಿಸುತ್ತಿದ್ದಾಗ ಅತೀ ವೇಗದಲ್ಲಿ ಬಂದ ಟೆಂಪೊ ಢಿಕ್ಕಿ ಹೊಡೆದು ತಲೆ ಮತ್ತು ಕೈಗೆ ಗಾಯವಾಗಿತ್ತು. ತತ್‌ಕ್ಷಣ ಪೊಲೀಸರು ಗಾಯಗೊಂಡ ಮಂಜುನಾಥ್‌ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ದಕ್ಷಿಣ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next