Advertisement

Politics: ಜಾತಿಗಣತಿಯಿಂದ ಸಿದ್ದರಾಮಯ್ಯಗೆ ಕೆಟ್ಟ ಹೆಸರು: ಎಚ್‌.ಡಿ. ಕುಮಾರಸ್ವಾಮಿ

11:38 PM Dec 10, 2023 | Team Udayavani |

ಹಾಸನ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾತಿ ಗಣತಿ ಮಾಡಿಸಿ ಜಾತಿಜಾತಿಗಳ ನಡುವೆ ವಿಷ ಬೀಜ ಬಿತ್ತುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಆರೋಪಿಸಿದರು.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆವರು, ಸಿದ್ದರಾಮಯ್ಯ ಎರಡನೇ ಬಾರಿಗೆ ಭಾರೀ ಕಷ್ಟಪಟ್ಟು ಮುಖ್ಯಮಂತ್ರಿ ಆಗಿದ್ದಾರೆ. ಜನರಲ್ಲಿ ಕೆಟ್ಟ ಭಾವನೆ ಮೂಡಿಸುವ ಪರಿಸ್ಥಿತಿಯನ್ನು ಅವರೇ ಸೃಷ್ಟಿಸುತ್ತಿದ್ದಾರೆ. ಇವರಿಗೆ ಜಾತಿ ಗಣತಿ ಯಾಕೆ ಬೇಕು? ಈ ರಾಜ್ಯ-ದೇಶ ಉದ್ಧಾರ ಆಗಬೇಕಾದರೆ ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ಮಾಡಲಿ. ಜಾತಿಗಣತಿ ಮಾಡಿ ಈಗ ಮುಸ್ಲಿಮರಿಗೆ ಹಣ ಕೊಡುತ್ತೇವೆ ಎಂದು ಹೇಳಿ ಅವರ ಹೆಸರಿನಲ್ಲಿಯೂ ಕಮಿಷನ್‌ ಹೊಡೆಯುತ್ತಾರೆ ಅಷ್ಟೇ ಎಂದು ಕುಮಾರಸ್ವಾಮಿ ಹೇಳಿದರು.

ಮುಸ್ಲಿಮರಿಗೇನೋ 10,000 ಕೋಟಿ ಕೋಡುತ್ತೀರಿ. ಉಳಿದವರ ಪಾಡೇನು? ರೈತರಿಗೆ ಏನು ಕೊಡುತ್ತೀರಿ? ರೈತರ ಮನೆಗೆ ಬ್ಯಾಂಕ್‌ನವರು, ಖಾಸಗಿ ಲೇವಾ ದೇವಿಗಾರರು ಬಂದು ನಿಲ್ಲುತ್ತಿದ್ದಾರೆ. ಅಂಥ ರೈತರಿಗೆ ನಿಮ್ಮ ಕೊಡುಗೆ ಏನು? ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು, ಈ ಸರಕಾರದಲ್ಲೂ ಭ್ರಷ್ಟಾಚಾರ ಇದೆ ಎಂದಿದ್ದಾರೆ. ಈ ಸರಕಾರದ ಯೋಗ್ಯತೆ ಲೋಕಸಭೆ ಚುನಾವಣೆಯಲ್ಲಿ ಗೊತ್ತಾಗಲಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next