ಕೊನೆಗಳಿಗೆಯಲ್ಲಿ ಸಿದ್ದರಾಮಯ್ಯ ವರುಣಾ ಮತ್ತು ಬಾದಾಮಿಯಿಂದ ಸ್ಪರ್ಧಿಸುತ್ತಾರೆ ಎಂಬ ವದಂತಿ ಕ್ಷೇತ್ರದಲ್ಲಿ ಇಂದಿಗೂ ಇದೆ. ಇಂಥ ಮಾತನ್ನು ಸ್ವತಃ ಕಾಂಗ್ರೆಸ್ನ ಮುಖಂಡರೇ ಕ್ಷೇತ್ರದಲ್ಲಿ ಹರಿಬಿಟ್ಟಿದ್ದಾರೆ. ವರುಣಾ ಮತ್ತು ಕೋಲಾರ ಎರಡೂ ಕ್ಷೇತ್ರದಲ್ಲಿ ಸ್ಪರ್ಧೆಗೆ ನಿರ್ಧರಿಸಿದ್ದೇನೆ, ಹೈಕಮಾಂಡ್ ಯಾವ ನಿರ್ಧಾರ ತೆಗೆದುಕೊಳ್ಳುತ್ತದೆಯೋ ಅದೇ ಅಂತಿಮ ಎಂದು ಸಿದ್ದರಾಮಯ್ಯ ಹೇಳಿದರೂ ಅವರು ಬಾದಾಮಿಗೆ ಬರುವ ವಿಷಯದಲ್ಲಿ ಕ್ಷೇತ್ರದ ಕಾಂಗ್ರೆಸ್ನ ಕೆಲವು ಮುಖಂಡರು ಇನ್ನೂ ನಿರೀಕ್ಷೆ ಇಟ್ಟುಕೊಂಡಿದ್ದಾರೆ.
Advertisement
ಈ ಬೆಳವಣಿಗೆ ಕಂಡು ಈಚೆಗೆ ಬಾದಾಮಿಯಲ್ಲಿ ನಡೆದ ಬಿಜೆಪಿ ಒಬಿಸಿ ಸಮಾವೇಶದಲ್ಲಿ ಸ್ವತಃ ಸಚಿವ ಶ್ರೀರಾಮುಲು ಕೂಡ ಇಲ್ಲಿ ಎಂ.ಕೆ.ಪಟ್ಟಣಶೆಟ್ಟಿ, ಮಹಾಂತೇಶ ಮಮದಾಪುರ, ಶಾಂತಗೌಡ ಪಾಟೀಲ ಅವರೊಂದಿಗೆ ನಾನೂ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ ಎಂದು ಬಹಿರಂಗ ಸಮಾವೇಶದಲ್ಲಿ ಹೇಳಿದ್ದಾರೆ. ಹೀಗಾಗಿ ಬಿಜೆಪಿಗೂ ಸಿದ್ದರಾಮಯ್ಯ ಕೊನೆ ಗಳಿಗೆಯಲ್ಲಿ ಬಾದಾಮಿಗೆ ಬರಹುದೆಂಬ ಅನುಮಾನವಿದೆ.
ಜೆಡಿಎಸ್ನ ಘೋಷಿತ ಅಭ್ಯರ್ಥಿ ಹನಮಂತ ಮಾವಿನಮರದ ಕಳೆದ ಬಾರಿ ಮೊದಲ ಪ್ರಯತ್ನವಾದರೂ 25 ಸಾವಿರಕ್ಕೂ ಹೆಚ್ಚು ಮತ ಪಡೆದಿದ್ದರು. ಆಗ ಸೋತರೂ ಐದು ವರ್ಷಗಳಿಂದ ನಿರಂತರವಾಗಿ ಪಕ್ಷ ಸಂಘಟನೆ, ಕ್ಷೇತ್ರದಲ್ಲಿ ಓಡಾಟ ಮಾಡಿಕೊಂಡಿದ್ದಾರೆ. ಇದೀಗ ಎರಡು ಬಾರಿ ಕುಮಾರಸ್ವಾಮಿ ಅವರನ್ನು ಕ್ಷೇತ್ರಕ್ಕೆ ಕರೆಸಿ ಪ್ರಚಾರ ಮಾಡಿದ್ದಾರೆ. ಬಿಜೆಪಿ-ಕಾಂಗ್ರೆಸ್ನ ಒಳಜಗಳದಲ್ಲಿ ನನಗೆ ಜನ ಕೈ ಹಿಡಿಯಲಿದ್ದಾರೆ ಎಂಬುದು ಅವರ ನಿರೀಕ್ಷೆ.
Related Articles
Advertisement
ಮತ್ತೆ ಸಿದ್ದು ಬಂದರೆ ಬಂಡಾಯ ಭೀತಿಪುನಃ ಸಿದ್ದರಾಮಯ್ಯ ಬಾದಾಮಿಗೆ ಬಂದರೆ ಈ ಬಾರಿ ಬಂಡಾಯ ಅಭ್ಯರ್ಥಿಯಾಗಿ ಚಿಮ್ಮನಕಟ್ಟಿ ಕುಟುಂಬದವರು ಕಣಕ್ಕಿಳಿಯುತ್ತಾರೆ ಎಂಬ ಮಾತು ಹರಿದಾಡುತ್ತಿದೆ. ಇದನ್ನು ಅವರ ಕುಟುಂಬದವರು ತಳ್ಳಿ ಹಾಕಿದ್ದಾರೆ. ಆದರೆ 2018ರಲ್ಲಿ ಟಿಕೆಟ್ ಘೋಷಣೆಯಾಗಿ ಬಳಿಕ ಸಿದ್ದರಾಮಯ್ಯಗೆ ಬಿಟ್ಟು ಕೊಟ್ಟ ಡಾ|ದೇವರಾಜ ಪಾಟೀಲ ಈ ಬಾರಿ ಬಾಗಲಕೋಟೆ ಕ್ಷೇತ್ರದ ಟಿಕೆಟ್ಗಾಗಿ ಪ್ರಬಲ ಪೈಪೋಟಿ ನಡೆಸಿದ್ದಾರೆ. ಬಾಗಲಕೋಟೆಯಲ್ಲಿ ಟಿಕೆಟ್ ತಪ್ಪಿದರೆ ಮತ್ತು ಸಿದ್ದರಾಮಯ್ಯ ಪುನಃ ಬಾದಾಮಿಗೆ ಬಂದರೆ ಡಾ|ದೇವರಾಜ ಅವರೇ ರೆಬೆಲ್ ಆಗಿ ನಿಲ್ಲುವ ಸಾಧ್ಯತೆ ಇದೆ. -ಶ್ರೀಶೈಲ ಕೆ. ಬಿರಾದಾರ