Advertisement

ಬದಿಯಡ್ಕ: ಎದೆ ಹಾಲು ಗಂಟಲಲ್ಲಿ ಸಿಲುಕಿ ಹಸುಗೂಸು ಸಾವು

12:17 AM Feb 18, 2023 | Team Udayavani |

ಬದಿಯಡ್ಕ: ಎದೆಹಾಲು ಗಂಟಲಲ್ಲಿ ಸಿಲುಕಿ ಅಬ್ದುಲ್‌ ರಹ್ಮಾನ್‌-ತಾಹಿರಾ ದಂಪತಿಯ 25 ದಿನದ ಮಗು ಸಾವಿಗೀಡಾಗಿದೆ. ಉಕ್ಕಿನಡ್ಕ ನಿವಾಸಿ ಮಗು ಸಾವಿಗೀಡಾಗಿದೆ.

Advertisement

ಫೆ. 16ರಂದು ಮಗುವಿಗೆ ಎದೆ ಹಾಲು ಉಣಿಸುತ್ತಿದ್ದಾಗ ಹಾಲು ಗಂಟಲಲ್ಲಿ ಸಿಲುಕಿಕೊಂಡು ಮಗು ಅಸ್ವಸ್ಥಗೊಂಡಿತು. ಕೂಡಲೇ ಮಗುವನ್ನು ಬದಿಯಡ್ಕ ಸರಕಾರಿ ಆಸ್ಪತ್ರೆಗೂ ಆ ಬಳಿಕ ಕಾಸರಗೋಡು ಜನರಲ್‌ ಆಸ್ಪತ್ರೆಗೂ ತಲುಪಿಸಿದರೂ ಜೀವ ರಕ್ಷಿಸಲು ಸಾಧ್ಯವಾಗಲಿಲ್ಲ. ಬದಿಯಡ್ಕ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next