Advertisement

Badlapur ಪೊಲೀಸ್ ರಿವಾಲ್ವರ್ ಕಸಿದು ಗುಂಡು ಹಾರಿಸಿದ ರೇ*ಪ್ ಆರೋಪಿ!!

07:44 PM Sep 23, 2024 | Team Udayavani |

ಮುಂಬಯಿ: ಬದ್ಲಾಪುರ ಅತ್ಯಾಚಾರ ಆರೋಪಿ ಅಕ್ಷಯ್ ಶಿಂಧೆ ಸೋಮವಾರ (ಸೆ 23) ಪೊಲೀಸ್ ಕಸ್ಟಡಿಯಲ್ಲಿದ್ದ ವೇಳೆ ಪೊಲೀಸ್ ಅಧಿಕಾರಿಯ ರಿವಾಲ್ವರ್ ಕಸಿದುಕೊಂಡು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾನೆ ಎಂದು ವರದಿಯಾಗಿದೆ.

Advertisement

ಪ್ರಾಥಮಿಕ ವರದಿಗಳ ಪ್ರಕಾರ ಪೊಲೀಸ್ ಅಧಿಕಾರಿ ರಿವಾಲ್ವರ್ ಕಸಿದುಕೊಂಡು ಗುಂಡು ಹಾರಿಸುತ್ತಿದ್ದ ವೇಳೆ ತಡೆಯಲು ಯತ್ನಿಸಿದ್ದು ಅವರಿಗೂ ಗುಂಡು ತಗುಲಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಥಾಣೆಯ ಬದ್ಲಾಪುರದ ಶಾಲೆಯೊಂದರ ಶೌಚಾಲಯದೊಳಗೆ ಇಬ್ಬರು ಅಪ್ರಾಪ್ತ ವಯಸ್ಕ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿ, ಶಾಲೆಯೊಂದರಲ್ಲಿ ಸ್ವಚ್ಛತಾ ಸಿಬಂದಿಯಾಗಿ ಕೆಲಸ ಮಾಡುತ್ತಿದ್ದ 23 ವರ್ಷದ ಅಕ್ಷಯ್ ಶಿಂಧೆಯನ್ನು ಪೊಲೀಸರು ಆಗಸ್ಟ್ 17 ರಂದು ಬಂಧಿಸಿದ್ದರು. ಕೃತ್ಯದ ವಿರುದ್ಧ ಭಾರೀ ಪ್ರತಿಭಟನೆಗಳು ನಡೆದಿದ್ದವು.

ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.ಕೆಲ ವರದಿಗಳ ಪ್ರಕಾರ ಶಿಂಧೆ ಸಾವನ್ನಪ್ಪಿದ್ದಾನೆ ಎಂದು ಹೇಳಲಾಗಿದೆ ಆದರೆ ಅದಿನ್ನೂ ಅಧಿಕೃತವಾಗಿ ದೃಢಪಟ್ಟಿಲ್ಲ

Advertisement

Udayavani is now on Telegram. Click here to join our channel and stay updated with the latest news.

Next