Advertisement

Mangaluru ವಿದ್ಯಾರ್ಥಿಗಳ ಬ್ಯಾಗ್‌ ತೂಕ ಇಳಿಕೆ: ಸಚಿವ ಮಧು ಬಂಗಾರಪ್ಪ

11:29 PM Sep 24, 2023 | Team Udayavani |

ಮಂಗಳೂರು: ಸರಕಾರಿ ಶಾಲೆಗಳಲ್ಲಿ ಮೂಲಸೌಕರ್ಯ ಹೆಚ್ಚಿಸುವ ಮೂಲಕ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿಸಲು ವಿಶೇಷ ಆದ್ಯತೆ ನೀಡಲಾಗುವುದು. ಜತೆಗೆ ವಿದ್ಯಾರ್ಥಿಗಳ ಬ್ಯಾಗ್‌ ತೂಕವನ್ನು ಈಗ ಇರುವ ಭಾರಕ್ಕಿಂತ ಮೂರನೇ ಒಂದರಷ್ಟು ಕಡಿಮೆ ಮಾಡಲು ಚಿಂತಿಸಲಾಗಿದೆ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

Advertisement

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಲೆಗಳಲ್ಲಿ ಸಂವಿಧಾನದ ಪೀಠಿಕೆ ಓದುವ ಅಭ್ಯಾಸವನ್ನು ಪ್ರಾರಂಭಿಸಲಾಗಿದೆ. ರಾಷ್ಟ್ರೀಯ ಶಿಕ್ಷಣ ನೀತಿಯ ಬದಲು ಎಸ್‌ಇಪಿ ಜಾರಿಗೊಳಿಸಲಾಗುತ್ತಿದೆ ಎಂದರು.

2 ಸಾವಿರ ಕೆಪಿಎಸ್‌ ಆರಂಭ
ಪ್ರಸ್ತುತ ರಾಜ್ಯದಲ್ಲಿ 300 ಕರ್ನಾಟಕ ಪಬ್ಲಿಕ್‌ ಸ್ಕೂಲ್‌(ಕೆಪಿಎಸ್‌)ಗಳಿದ್ದು, ಅವು ಗಳನ್ನು 2 ಸಾವಿರಕ್ಕೆ ಏರಿಸಲಾಗುವುದು. ಪ್ರತೀ 2-3 ಗ್ರಾಪಂಗಳಿಗೆ ಒಂದು ಶಾಲೆ ಮಾಡುವ ಗುರಿ ಇಟ್ಟುಕೊಳ್ಳಲಾಗಿದ್ದು, ಆರಂಭದಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 1ರಿಂದ 3ರಷ್ಟು ಶಾಲೆಗಳನ್ನು ನೀಡಲು ಉದ್ದೇಶಿಸಲಾಗಿದೆ. ಈ ವರ್ಷ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ 3 ಬೋರ್ಡ್‌ ಪರೀಕ್ಷೆಗಳನ್ನು ನಡೆಸಲಾಗಿದ್ದು, ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮತ್ತೆ ಪರೀಕ್ಷೆ ಕಟ್ಟಿ, ಉತ್ತೀರ್ಣರಾಗಿ ಶಿಕ್ಷಣವನ್ನು ಮುಂದುವರಿಸಲು ಅನುಕೂಲವಾಗಿದೆ.

ಇದನ್ನು 10ನೇ ತರಗತಿಗೂ ವಿಸ್ತರಿಸಲಾಗು ತ್ತದೆ. ಈ ವರ್ಷ ಬೋರ್ಡ್‌ ಪರೀಕ್ಷೆ ಬರೆದ 1.30 ಲಕ್ಷ ವಿದ್ಯಾರ್ಥಿಗಳ ಪೈಕಿ 42 ಸಾವಿರ ವಿದ್ಯಾರ್ಥಿಗಳು ತೇರ್ಗಡೆಯಾಗಿ ಕಾಲೇಜಿಗೆ ದಾಖಲಾಗಿದ್ದಾರೆ ಎಂದು ಹೇಳಿದರು.

ಸಪ್ಲಿಮೆಂಟರಿ (ಬೋರ್ಡ್‌) ಪರೀಕ್ಷೆ ಬರೆದು ಕಾಲೇಜು ಸೇರುವವರಿಗೆ ಬ್ರಿಜ್‌ ಕೋರ್ಸ್‌ ನೀಡುವಂತೆ ಉನ್ನತ ಶಿಕ್ಷಣ ಸಚಿವ ರಲ್ಲಿ ಕೋರಲಾಗಿದೆ ಎಂದರು.

Advertisement

ಪ್ರಣವಾನಂದ ಸ್ವಾಮೀಜಿ ಈಡಿಗ ಸಮುದಾಯದ ನಾಯಕ ಅಲ್ಲ. ಅವರದ್ದು ಹಿನ್ನೆಲೆಯನ್ನು ತಿಳಿದುಕೊಳ್ಳಿ. ಹಿಂದುಳಿವ ವರ್ಗದ ಬಗ್ಗೆ ಕಾಳಜಿ ಅವರೊಬ್ಬರಿಗೇ ಇರುವುದಲ್ಲ. ಕಾಳಜಿ ಇರುವವರು ಸಾಕಷ್ಟು ಮಂದಿ ಇದ್ದಾರೆ ಎಂದು ಮಧು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಡಿಸಿಸಿ ಹರೀಶ್‌ ಕುಮಾರ್‌, ಪಕ್ಷದ ಪ್ರಮುಖ ರಾದ ಬಿ. ಇಬ್ರಾಹಿಂ, ಅಭಯಚಂದ್ರ, ಜೆ.ಆರ್‌. ಲೋಬೊ, ಐವನ್‌ ಡಿ’ಸೋಜಾ, ಕೋಡಿಜಾಲ್‌ ಇಬ್ರಾಹಿಂ, ಪದ್ಮರಾಜ್‌ ಆರ್‌., ಎಂ.ಶಶಿಧರ ಹೆಗ್ಡೆ, ಕೃಪಾ ಆಳ್ವ, ಇನಾಯತ್‌ ಆಲಿ, ಶಾಲೆಟ್‌ ಪಿಂಟೋ, ಮಮತಾ ಗಟ್ಟಿ, ಪ್ರತಿಭಾ ಕುಳಾç ಮೊದಲಾದವರು ಉಪಸ್ಥಿತರಿದ್ದರು.

ದ.ಕ. ಲೋಕಸಭೆ ಕ್ಷೇತ್ರವೂ ಕಾಂಗ್ರೆಸ್‌ಗೆ
ಮುಂದಿನ ಲೋಕಸಭಾ ಚುನಾವಣೆಯಲ್ಲಿ ದ.ಕ. ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಯನ್ನು ಗೆಲ್ಲಿಸುವ ಸವಾಲು ತೆಗೆದುಕೊಳ್ಳಲಿದ್ದೇವೆ. ಬಿಜೆಪಿಯವರು ಇಲ್ಲಿಯವರೆಗೆ ಭಾವನಾತ್ಮಕ ವಿಚಾರಗಳನ್ನು ಮುಂದಿಟ್ಟು ಗೆಲ್ಲುತ್ತಿದ್ದರು. ಮುಂದೆ ಅದರಿಂದಲೇ ಸೋಲನುಭವಿಸಲಿದ್ದಾರೆ. 2004ರ ಹಿಂದಿನ ಸ್ಥಿತಿ ಮತ್ತೆ ದ.ಕ. ಜಿಲ್ಲೆಯಲ್ಲಿ ಮರುಕಳಿಸಲಿದೆ. ಆಯಾ ಕ್ಷೇತ್ರಗಳಲ್ಲಿ ಪಕ್ಷದ ಮುಖಂಡರ ಜತೆ ಮಾತುಕತೆ ನಡೆಸಿ ಮುಂಬರುವ ಲೋಕಸಭಾ ಚುನಾವಣೆಯ ಸಂಭಾವ್ಯ ಅಭ್ಯರ್ಥಿಗಳ ವರದಿ ನೀಡಲು ವೀಕ್ಷಕರಿಗೆ 15 ದಿನ ಸಮಯಾವಕಾಶ ನೀಡಲಾಗಿದೆ ಎಂದು ಲೋಕಸಭಾ ಚುನಾವಣೆಯ ದ.ಕ. ಜಿಲ್ಲಾ ವೀಕ್ಷಕ-ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಬಿಜೆಪಿ ಜತೆ ಮೈತ್ರಿಗೆ ಮೊದಲು ಜೆಡಿಎಸ್‌ನವರು ಕಾಂಗ್ರೆಸ್‌ ಕೋಮುವಾದಿ ಎಂದು ಆರೋಪ ಮಾಡುತ್ತಿದ್ದರು. ಈಗ ಅವರ ಕತೆ ಏನಾಯ್ತು? ದ.ಕ. ಸೇರಿದಂತೆ ಜೆಡಿಎಸ್‌ನ ರಾಜ್ಯ ಮಟ್ಟದ ಅನೇಕ ನಾಯಕರು ಕಾಂಗ್ರೆಸ್‌ ಸಂಪರ್ಕದಲ್ಲಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next