Advertisement

ಮುಳುಗಡೆ ನಾಡು ಯೋಗಮಯ

01:04 PM Jun 22, 2019 | Team Udayavani |

ಬಾಗಲಕೋಟೆ: ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ಬೃಹತ್‌ ಯೋಗ ಪ್ರದರ್ಶನ ನಡೆಯಿತು.

Advertisement

ಜಿಲ್ಲಾಡಳಿತ, ಜಿಪಂ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಜಿಲ್ಲಾ ಆಯುಷ್‌ ಹಾಗೂ ಭಾರತ ಸೇವಾದಳದ, ವಿವಿಧ ಸಂಘ-ಸಂಸ್ಥೆಗಳು, ಆಯುರ್ವೇದ ಮಹಾವಿದ್ಯಾಲಯಗಳ ಸಹಯೋಗದಲ್ಲಿ ಹಮ್ಮಿಕೊಂಡ ಕಾರ್ಯಕ್ರಮಕ್ಕೆ ಜಿಪಂನ ಉಪಾಧ್ಯಕ್ಷ ಮುತ್ತಪ್ಪ ಕೋಮಾರ ಚಾಲನೆ ನೀಡಿದರು.

ಜಿಲ್ಲಾಧಿಕಾರಿ ಆರ್‌.ರಾಮಚಂದ್ರನ್‌ ಮಾತನಾಡಿ, ಆರೋಗ್ಯವೇ ಭಾಗ್ಯ. ನಂತರ ಅರಿವು, ಶಿಕ್ಷಣ, ಯೋಗಾಸನಗಳನ್ನು ದಿನನಿತ್ಯ ಅಭ್ಯಾಸ ಮಾಡಿ ಸದೃಢ ದೇಹ, ಸದೃಢ ಮನಸ್ಸು ಹಾಗೂ ಸದೃಢ ದೇಶ ಕಟ್ಟೋಣ. ಯೋಗ ದೈಹಿಕ ಮಾನಸಿಕ ಆರೋಗ್ಯ ವೀರಿದಂತಹದಾಗಿದ್ದು, ಜೀವನದಲ್ಲಿ ಶಾಂತಿ, ನೆಮ್ಮದಿ, ಸೌಹಾರ್ದ, ಸಂತೋಷ, ಯಶಸ್ಸು ಎಲ್ಲವೂ ಕೈಗೂಡಬೇಕೆಂದರೆ ಯೋಗ ಅಗತ್ಯವಾಗಿದೆ ಎಂದು ತಿಳಿಸಿದರು.

ಜಿಪಂ ಸಿಇಒ ಗಂಗೂಬಾಯಿ ಮಾನಕರ್‌ ಮಾತನಾಡಿದರು. ಜಿಲ್ಲಾಧಿಕಾರಿ ಆರ್‌.ರಾಂಚಂದ್ರನ್‌ ಮನೆಮದ್ದು ದ್ರವ್ಯಗಳು ಹಾಗೂ ಸಿರಿಧಾನ್ಯಗಳ ಪ್ರದರ್ಶನಕ್ಕೆ ಮೆಚ್ಚುಗೆ ವ್ಯಕ್ತಪಡಿಸುವುದರೊಂದಿಗೆ ಕೆಲವೊಂದು ಮನೆಮದ್ದು ವಸ್ತುಗಳ ಬಗ್ಗೆ ವಿವರಣೆ ನೀಡಿದರು.

ಆಯುಷ ಇಲಾಖೆಯ ಹಿರಿಯ ವೈದ್ಯಾಧಿಕಾರಿ ಡಾ| ಚಂದ್ರಕಾಂತ ರಕ್ಕಸಗಿ ವಂದಿಸಿದರು. ನಂತರ ತುಳಸಿಗೇರಿ ಸರ್ಕಾರಿ ಪ್ರೌಢಶಾಲೆ, ತುಳಸಿಗೇರಿ ಹಾಗೂ ಸರ್ಕಾರಿ ಕುವೆಂಪು ಮಾದರಿ ಪ್ರಾಥಮಿಕ ಶಾಲೆಯ 100 ಮಕ್ಕಳು ಯೋಗ ನೃತ್ಯ ಪ್ರದರ್ಶನ ಮಾಡಿ ಪ್ರೇಕ್ಷಕರನ್ನು ಮಂತ್ರ ಮುಗ್ಧರನ್ನಾಗಿಸಿದರು. ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯದಿಂದ ಐದು ನಿಮಿಷಗಳ ಕಾಲ ಜ್ಞಾನ ಮಾಡಿಸಲಾಯಿತು. ಇದೇ ಸಂದರ್ಭದಲ್ಲಿ ಯೋಗ ಸಾಧಕರಾದ ನಿವೃತ್ತ ಶಿಕ್ಷಕ ಬೊಮ್ಮಯ್ಯ ಹಿರೇಮಠ, ಭಾರತ ಸೇವಾದಳದ ಜಿಲ್ಲಾ ಸಮನ್ವಯಾಧಿಕಾರಿ ಮಹೇಶ ಪತ್ತಾರ, ಡಾ| ಸಂಗೀತಾ ಬಳಗಾನೂರ, ಲಕ್ಷ್ತ್ರೀ ಗೌಡರ, ತುಳಸಿಗೇರಿ ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾದ್ಯಾಯ ಸಿ.ಕೆ. ಚನಾಳ, ಸರ್ಕಾರಿ ಕುವೆಂಪು ಮಾದರಿ ಪ್ರಾಥಮಿಕ ಶಾಲೆಯ ಮುಖ್ಯೋಪಾದ್ಯಾಯ ಸಿ.ಎ. ಸಣ್ಣಪ್ಪನವರ, ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ನಾಗರತ್ನಾ ಅಕ್ಕನವರ ಅವರನ್ನು ಸನ್ಮಾನಿಸಲಾಯಿತು.

Advertisement

ನಂತರ ಯೋಗ ಪ್ರಾತ್ಯಕ್ಷಿಕೆಯಲ್ಲಿ ಜಿಲ್ಲಾಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 400 ಮಕ್ಕಳು ಸೇರಿದಂತೆ ವಿವಿಧ ಶಾಲಾ ಮಕ್ಕಳು ಹಾಗೂ ಸಾರ್ವಜನಿಕರು ಸೇರಿ ಅಂದಾಜು 1500ಕ್ಕೂ ಹೆಚ್ಚು ಜನ ಪಾಲ್ಗೊಂಡಿದ್ದರು.

ಭಾರತ ಸೇವಾ ದಳದ ಜಿಲ್ಲಾ ಸಮನ್ವಯಾಧಿಕಾರಿ ಮಹೇಶ ಪತ್ತಾರ ಹಾಗೂ ಸಂಗಡಿಗರು ಮತ್ತು ಡಾ| ಸಂಗೀತಾ ಬಳಗಾನೂರ ಅವರು ಸಾಮೂಹಿಕ ಯೋಗಭ್ಯಾಸ ಮಾಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next