Advertisement

ಸಾಧ್ಯವಾದ್ರೆ ಸಹಾಯ ಮಾಡಿ; ತೊಂದ್ರೆ ಕೊಡಬೇಡಿ

08:59 AM Feb 02, 2019 | |

ಬಾಗಲಕೋಟೆ: ನಮ್ಮಿಂದ ಸಾಧ್ಯವಾದರೆ, ಸಮುದಾಯದ ಜನರಿಗೆ ಸಹಾಯ- ಸಹಕಾರ ಮಾಡಬೇಕು. ಇಲ್ಲದಿದ್ದರೆ ತೊಂದರೆ ಕೊಡುವ ಕೆಲಸ ಮಾಡಬಾರದು ಎಂದು ಜಿಲ್ಲಾಧಿಕಾರಿ ಆರ್‌. ರಾಮಚಂದ್ರನ್‌ ಹೇಳಿದರು.

Advertisement

ನವನಗರದ ಡಾ| ಬಿ.ಆರ್‌.ಅಂಬೇಡ್ಕರ್‌ ಭವನದಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಹಮ್ಮಿಕೊಂಡ ಮಡಿವಾಳ ಮಾಚಿದೇವ ಜಯಂತಿಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಮಾಜದಲ್ಲಿ ಕಾಲ ಕಾಲಕ್ಕೆ ಮಾರ್ಗದರ್ಶನ ನೀಡಲಿಕ್ಕೆ ತಮ್ಮ ಜೀವನದ ಆಂದೋಲನ ಮೂಲಕ ಮುಂದಿನ ಪೀಳಿಗೆಗೆ ಕೊಡುಗೆ ಬಿಟ್ಟುಹೋಗಿದ್ದಾರೆ. ಹಿಂದೆ ಇದ್ದ ಮಹಾಪುರುಷರು ಹಾಕಿಕೊಟ್ಟ ಮಾರ್ಗದರ್ಶನ ಹಾಗೂ ಸಂದೇಶ ಸದಾ ಕಾಲ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸಮಾಜದಲ್ಲಿ ನಮ್ಮಿಂದ ಸಾಧ್ಯವಿದ್ದಲ್ಲಿ ಮತ್ತೂಬ್ಬರಿಗೆ ಸಹಕಾರಿ ನೀಡಬೇಕು. ಇಲ್ಲದಿದ್ದರೆ ಮತ್ತೂಬ್ಬರಿಗೆ ತೊಂದರೆ ಮಾಡಬಾರದು ಎಂದರು. ಜಿಪಂ, ತಾಪಂ, ಹಾಗೂ ಗ್ರಾಪಂ ಮಟ್ಟದಲ್ಲಿ ಪ್ರತಿಯೊಂದು ಮನೆಗೆ ಶೌಚಾಲಯ ನಿರ್ಮಾಣ ಮಾಡಲು ಮುಂದಾಗಿದ್ದು, ಬಯಲು ಶೌಚಮುಕ್ತ ಗ್ರಾಮಗಳನ್ನಾಗಿ ಮಾಡಲು ಕೈಜೋಡಿಸಬೇಕೆಂದು ಮನವಿ ಮಾಡಿದರು.

ತಾಪಂ ಅಧ್ಯಕ್ಷ ಚನ್ನನಗೌಡರ ಪರನಗೌಡ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನದಂತಹ ಮಹತ್ವ ಮತ್ತೂಂದು ಇಲ್ಲ. ಸಮುದಾಯ ಒಗ್ಗಟ್ಟಿನ ಸಂದೇಶ ಸಾರುವ ಮೂಲಕ ತಮ್ಮ ಬಲ ವೃದ್ಧಿಸಿ ಮುಖ್ಯವಾಹಿನಿಗೆ ಬರಬೇಕು ಎಂದು ಹೇಳಿದರು.

ಹೊಸತನ ರೂಪಿಸಿಕೊಳ್ಳಿ: ಮಡಿವಾಳ ಜನಾಂಗ ಕೊಳೆಯಾದ ಬಟ್ಟೆ ಶುಚಿಗೊಳಿಸಿ ಅದರಿಂದ ಬಂದ ಹಣದಿಂದ ಜೀವನ ನಡೆಸುತ್ತಿದ್ದು, ಕಾಲಕ್ಕೆ ಅನುಗುಣವಾಗಿ ಬದುಕಿನಲ್ಲಿ ಹೊಸತನ ರೂಪಿಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕು ಎಂದು ತಿಳಿಸಿದರು.

Advertisement

ಪೂರ್ವಜರು ಹಾಕಿಕೊಟ್ಟ ಹಾದಿಯಲ್ಲಿ ನಡೆಯಬೇಕು. ಸಮುದಾಯದವರು ಮಕ್ಕಳಿಗೆ ಶಿಕ್ಷಣ ಕೊಡಿಸಲು ಮುಂದಾಗಬೇಕು. ಆಗ ಮಾತ್ರ ಸಮಾಜ ಮುಖ್ಯವಾಹಿನಿಗೆ ಬರಲು ಸಾಧ್ಯ. ಬಸವಾದಿ ಪ್ರಮತರ ಸಾಲಿನಲ್ಲಿ ಮಡಿವಾಳ ಮಾಚಿದೇವರು ಅಗ್ರಗಣ್ಯ ಸ್ಥಾನ ಪಡೆದವರಾಗಿದ್ದು, ಅವರ ಆದರ್ಶ ಮತ್ತು ತತ್ವ ಪಾಲಿಸಲು ತಿಳಿಸಿದರು. ಅಥಣಿ ತಾಲೂಕಿನ ಜಿಂಜವಾಡದ ಬಸವರಾಜೇಂದ್ರ ಶರಣರು ಉಪನ್ಯಾಸ ನೀಡಿದರು.

ಜಿಪಂ ಸಿಇಒ ಗಂಗೂಬಾಯಿ ಮಾನಕರ, ಅಪರ ಜಿಲ್ಲಾಧಿಕಾರಿ ದುರಗೇಶ ರುದ್ರಾಕ್ಷಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಶಶಿಕಲಾ ಹುಡೇದ, ಕಂದಾಯ ಇಲಾಖೆ ಶಿರಸ್ತೇದಾರ ಎಂ.ಬಿ. ಗುಡೂರ, ಗೋಪಾಲ ಮಡಿವಾಳರ ಇದ್ದರು. ಇದಕ್ಕೂ ಮುಂಚೆ ಜಿಲ್ಲಾಡಳಿತ ಭವನದ ಆವರಣದಲ್ಲಿ ಮಡಿವಾಳ ಮಾಚಿದೇವ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಮೆರವಣಿಗೆಗೆ ಶಾಸಕ ವೀರಣ್ಣ ಚರಂತಿಮಠ ಚಾಲನೆ ನೀಡಿದರು. ಮೆರವಣಿಗೆ ಜಿಲ್ಲಾಡಳಿತ ಭವನದಿಂದ ಪ್ರಾರಂಭವಾಗಿ ನವನಗರದ ವಿವಿಧೆಡೆ ಸಂಚರಿಸಿ ಡಾ|ಬಿ.ಆರ್‌. ಅಂಬೇಡ್ಕರ್‌ ಭವನಕ್ಕೆ ಮುಕ್ತಾಯಗೊಂಡಿತು. ಮೆರವಣಿಗೆಯಲ್ಲಿ ವಿವಿಧ ಜಾನಪದ ಕಲಾತಂಡಗಳು ಭಾಗವಹಿಸಿದ್ದವರು. ಕುಂಭ ಹೊತ್ತ ಮಹಿಳೆಯರು ಮೆರವಣಿಗೆ ಕೇಂದ್ರ ಬಿಂದು ಆಗಿದ್ದರು.

ಭಾರತ ಗ್ರಾಮಗಳಿಂದ ಕೂಡಿದ ದೇಶ. ಪ್ರತಿಯೊಂದು ಗ್ರಾಮಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಪ್ರತಿಯೊಬ್ಬರೂ ಶೌಚಾಲಯ ನಿರ್ಮಿಸಿಕೊಳ್ಳಬೇಕು. ಉತ್ತಮ ನಾಗರಿಕ, ಮಾನವೀಯ, ಸಂಸ್ಕೃತಿ ಕಾಪಾಡಿಕೊಳ್ಳಬೇಕಾದರೆ ಸ್ವಚ್ಛತೆಗೆ ಹೆಚ್ಚು ಮಹತ್ವ ನೀಡಬೇಕು. ಆಗ ಮಾತ್ರ ಸುಂದರ, ಸ್ವಚ್ಛ ಸಮಾಜ ನಿರ್ಮಾಣ ಮಾಡಲು ಸಾಧ್ಯ.
•ಆರ್‌. ರಾಮಚಂದ್ರನ್‌, ಜಿಲ್ಲಾಧಿಕಾರಿ

Advertisement

Udayavani is now on Telegram. Click here to join our channel and stay updated with the latest news.

Next