Advertisement

ಬಾಗಲಕೋಟೆ: ಮಹಾದೇವಿ ಕುರಿ ರಾಜ್ಯಮಟ್ಟಕ್ಕೆ ಆಯ್ಕೆ

11:57 AM Oct 29, 2022 | Team Udayavani |

ಬಾಗಲಕೋಟೆ: ಕಳೆದ ಅ.28 ರಂದು ಶುಕ್ರವಾರ ಜಿಲ್ಲೆಯ ಮುಧೋಳದಲ್ಲಿ ನಡೆದ ಜಿಲ್ಲಾ ಮಟ್ಟದ ಮಕ್ಕಳ ಹಕ್ಕುಗಳ ಸಂಸತ್ 2022 ಮಕ್ಕಳ ಸಮಾಲೋಚನೆ ಸಭೆಯಲ್ಲಿ ಬಾದಾಮಿ ತಾಲೂಕಿನ ಮುತ್ತಲಗೇರಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಮಹಾದೇವಿ ಕುರಿ ಭಾಗವಹಿಸಿ ರಾಜ್ಯಮಟ್ಟದ ಮಕ್ಕಳ ಹಕ್ಕುಗಳ ಸಂಸತ್ ಸಮಲೋಚನಾ ಸಭೆಗೆ ಆಯ್ಕೆಯಾಗಿದ್ದಾರೆ.

Advertisement

ಈ ವಿದ್ಯಾರ್ಥಿನಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಆರೀಫ್ ಬಿರಾದಾರ, ಕ್ಷೇತ್ರ ಸಮನ್ವಯಾಧಿಕಾರಿ ಎಂ.ಬಿ.ದೊಡ್ಡಪ್ಪನ್ನವರ ಸೇರಿದಂತೆ ಊರಿನ ಗ್ರಾಮಸ್ಥರು, ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಸರ್ವ ಶಿಕ್ಷಕರು, ಎಸ್.ಡಿ.ಎಂ.ಸಿ.ಪದಾಧಿಕಾರಿಗಳು, ಮಕ್ಕಳು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next