Advertisement
ಮಂಗಳವಾರ ತಾಲೂಕಿನ ಸೂಳೆಕೆರೆಯಲ್ಲಿ ವಿವಿಧ ಯೋಜನೆಗಳ ಉದ್ಘಾಟನೆ ಹಾಗೂ ಕೆರೆಗೆ ಬಾಗಿನ ಅರ್ಪಿಸಿ ಅವರು ಮಾತನಾಡಿದರು.ಏಷ್ಯಾದಲ್ಲೇ ಎರಡನೇ ಅತಿ ದೊಡ್ಡ ಕೆರೆ ಎಂದು ಪ್ರಸಿದ್ಧಿ ಪಡೆದಿರುವ ಕೆರೆಗೆ ಎರಡನೇ ಬಾರಿ ಬಾಗಿನ ಅರ್ಪಿಸಿದ ಖುಷಿ ನನಗಿದೆ. ಈ ಹಿಂದೆ 2009ರಲ್ಲಿ ಕೆರೆಯ ನೀರನ್ನು ಭೀಮಸಮುದ್ರಕ್ಕೆ ಒಯ್ದು ತಮ್ಮ ತೋಟಗಳಿಗೆ ನೀರನ್ನು ಬಳಕೆ ಮಾಡಿಕೊಂಡು ಕೆರೆನೀರನ್ನು ಖಾಲಿ ಮಾಡಿದ್ದಾರೆ ಎಂದು ಕೆಲವರು ಆರೋಪ ಸೃಷ್ಟಿಸಿದ್ದರು. ಸೂಳೆಕೆರೆ ಅಭಿವೃದ್ಧಿಗೆ ಬದ್ಧರಾಗಿದ್ದೇವೆಯೇ ಹೊರತು ಯಾವತ್ತೂ ಕೆರೆ ನೀರನ್ನು ದುರ್ಬಳಕೆ ಮಾಡಿಕೊಂಡಿಲ್ಲ.ಸೂಳೆಕೆರೆಯಲ್ಲಿ ಶಾಶ್ವತ ನೀರಿನ ಸಂಗ್ರಹ ಮಾಡಿ ಭದ್ರಾ ಡ್ಯಾಂನಿಂದ 1 ಟಿಎಂಸಿ ನೀರನ್ನು ಬಿಡಲು ಯೋಜನೆ ರೂಪಿಸಿದ್ದು, ಶೀಘ್ರದಲ್ಲಿ ಅನುಷ್ಠಾನಕ್ಕೆ ತರಲಾಗುವುದು, ಯಾರೇ ನನ್ನ ಮೇಲೆ ಆರೋಪ ಮಾಡಿದರೂ ನನ್ನ ವ್ಯಕ್ತಿತ್ವ ಏನೆಂಬುದು ಜಿಲ್ಲೆಯ ಜನತೆಗೆ ಗೊತ್ತಿದೆ ಎಂದರು.
Related Articles
Advertisement
ಸಿಎಂ ಯಡಿಯೂರಪ್ಪ ಬದಲಾವಣೆ ಮಾತೇ ಇಲ್ಲ : ಶಿರಾ ಮತ್ತು ಆರ್.ಆರ್. ನಗರ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದು, ಬಿ.ಎಸ್. ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿ ಮೂರು ವರ್ಷ ಮುಂದುವರೆಯಲಿದ್ದಾರೆ. ಯಾವುದೇ ಕಾರಣಕ್ಕೂ ಅವರನ್ನು ಸಿಎಂ ಕುರ್ಚಿಯಿಂದ ಇಳಿಸುವ ಮಾತೇ ಇಲ್ಲ ಎಂದು ಸಂಸದ ಜಿ.ಎಂ. ಸಿದ್ದೇಶ್ವರ್ ಸ್ಪಷ್ಪಪಡಿಸಿದರು. ದೇಶದಲ್ಲಿ ಮೋದಿ, ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದ ಸರ್ಕಾರಗಳು ಅವಧಿ ಪೂರ್ಣಗೊಳಿಸಲಿವೆ. ಅದನ್ನು ಯಾರು ಕೂಡ ತಪ್ಪಿಸಲು ಸಾಧ್ಯವಿಲ್ಲ.ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗುವ ಕನಸು ಕಂಡಿದ್ಧಾರೆ. ಅದಕ್ಕಾಗಿ ಯಡಿಯೂರಪ್ಪ ಅವರನ್ನು ಕುರ್ಚಿಯಿಂದ ಇಳಿಸಲಾಗುತ್ತದೆ ಎಂದುಹೇಳಿಕೊಂಡು ತಿರುಗುತ್ತಿದ್ದಾರೆ. ಶಿರಾ, ಆರ್.ಆರ್. ನಗರ ಕ್ಷೇತ್ರಗಳ ಉಪಚುನಾವಣೆಯಲ್ಲಿ ಜನರು ವಿಪಕ್ಷಗಳಿಗೆ ತಕ್ಕ ಉತ್ತರ ನೀಡಿದ್ದಾರೆ ಎಂದರು.