Advertisement

‘ಪಕ್ಷ ಬಿಟ್ಟು ಬಿಜೆಪಿಗೆ ಹೋದವರು ಮತ್ತೇಕೆ ಬಂದ್ರೀ’?: ನಟಿ ಭಾವನಾಗೆ ಕೈ ಕಾರ್ಯಕರ್ತೆ ತರಾಟೆ

04:33 PM Jul 26, 2022 | Team Udayavani |

ಬೆಂಗಳೂರು: ಕಾಂಗ್ರೆಸ್ ಪಕ್ಷದ ಮೌನ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಚಿತ್ರನಟಿ ಭಾವನಾ ಅವರನ್ನು ಕಾಂಗ್ರೆಸ್ ನ ಹಿರಿಯ ಮುಖಂಡರ ಮುಂದೆಯೇ ಕೈ ಕಾರ್ಯಕರ್ತೆಯೊಬ್ಬರು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಪ್ರಸಂಗ ಪಡೆಯಿತು.

Advertisement

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಬಿ.ಕೆ.ಹರಿಪ್ರಸಾದ್, ಸಲೀಂ ಅಹಮದ್ ಅವರು ಕುಳಿತಿದ್ದ ವೇದಿಕೆಯತ್ತ ತೆರಳಿದ ನಟಿ ಭಾವನಾ ಅವರನ್ನು ಮಹಿಳಾ ಕಾರ್ಯಕರ್ತೆಯೊಬ್ಬರು ತಡೆಹಿಡಿದು ‘ವೇದಿಕೆಯ ಬಿಟ್ಟು ಬದಿಗೆ ಬನ್ನಿ’ ಎಂದು ಅಡ್ಡಿಪಡಿಸಿದರು.

ನೀವು ಬಿಜೆಪಿಗೆ ಹೋಗಿದ್ದೀರಿ ಮತ್ಯಾಕೆ ಇಲ್ಲಿಗೆ ಬಂದಿದ್ದೀರಿ ಎಂದು ಪ್ರಶ್ನಿಸಿದರು. ಬಳಿಕ ವೇದಿಕೆಯಲ್ಲಿ ಇದ್ದ ನಾಯಕರು ಸಮಾಧಾನ ಪಡಿಸಿದರು. ಆ ಹಿನ್ನೆಲೆಯಲ್ಲಿ ನಟಿ ಭಾವನಾ ಕಾರ್ಯಕರ್ತರು ಕುಳಿತಿದ್ದ ಬದಿಯಲ್ಲೇ ನಿಂತು ಮೌನ ಪ್ರತಿಭಟನೆಯಲ್ಲಿ ಪಾಲ್ಗೊಂಡರು.

ಇದನ್ನೂ ಓದಿ:“ಕೆಜಿಎಫ್ ಚಾಪ್ಟರ್‌ 2” ಬಗ್ಗೆ ಕುತೂಹಲಕಾರಿ ವಿಚಾರ ಬಿಚ್ಚಿಟ್ಟ ಅಮೀರ್ ಖಾನ್

ಈ ವೇಳೆ ಮಾತನಾಡಿದ ನಟಿ ಭಾವನಾ, ಈ ಹಿಂದೆ ನಾನು ಕಾಂಗ್ರೆಸ್ ನಿಂದ ಬಿಜೆಪಿಗೆ ಹೋಗಿದ್ದೆ. ಅದು ಆತುರದ ನಡೆ ಎಂದು ಅನಿಸಿತು. ಆ ಹಿನ್ನೆಲೆಯಲ್ಲಿ ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಮರಳಿರುವುದಾಗಿ ಹೇಳಿದರು‌.

Advertisement

ಬಿಜೆಪಿಗೆ ಹೋದ ನಂತರ ನಾನು ಮಾಡಿದ್ದ ತಪ್ಪು ಅರಿವಿಗೆ ಬಂತು. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಅಧಿಕಾರ ತರುವ ನಿಟ್ಟಿನಲ್ಲಿ ಕೆಲಸ ಮಾಡುವುದಾಗಿ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next