Advertisement

Fake ಆಧಾರ್‌ ಕಾರ್ಡ್‌ ಬಳಸಿ ಆರೋಪಿಗಳಿಗೆ ಜಾಮೀನು !

12:25 AM Dec 14, 2023 | Team Udayavani |

ಮಂಗಳೂರು: ವ್ಯಕ್ತಿಯೋರ್ವ ನಕಲಿ ಆಧಾರ್‌ಕಾರ್ಡ್‌ ಬಳಸಿ ದ.ಕ., ಉಡುಪಿ ಮತ್ತು ಬೆಂಗಳೂರಿನಲ್ಲಿ ಸುಮಾರು 14 ಪ್ರಕರಣಗಳಲ್ಲಿ ಆರೋಪಿಗಳಿಗೆ ಜಾಮೀನು ಶ್ಯೂರಿಟಿ ನೀಡಿರುವುದು ಬೆಳಕಿಗೆ ಬಂದಿದೆ.

Advertisement

ಉಡುಪಿ ಜಿಲ್ಲೆ ಕಳತ್ತೂರು ಚಂದ್ರನಗರದ ಉಮರಬ್ಬ ಮೊಹಿನುದ್ದೀನ್‌ (50) ಅ. 30ರಂದು ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್ಟಿಎಸ್‌ಸಿ-1(ಪೋಕ್ಸೋ)ರ ವಿಚಾರಣೆಯಲ್ಲಿ ಪ್ರಕರಣದ ಆರೋಪಿ ಗಳಾದ ರಫೀಕ್‌, ಸಾರಮ್ಮ ಮತ್ತು ಆಯಿಷಾಬಾನುಗೆ ಜಾಮೀನು ಶ್ಯೂರಿಟಿ ನೀಡಿದ್ದ. 2022ರ ಜು. 26ರಂದು ಈತ ಬೇರೆ ಸಂಖ್ಯೆಯ ಆಧಾರ್‌ ಕಾರ್ಡ್‌ ಮೂಲಕ ಜಾಮೀನು ಶ್ಯೂರಿಟಿ ನೀಡಿದ್ದ. ಈತನ ದಾಖಲೆಗಳ ಬಗ್ಗೆ ಪರಿಶೀಲನೆ ನಡೆಸಿದಾಗ ಈತ ವಿವಿಧೆಡೆ ಇದೇ ರೀತಿ 14 ಪ್ರಕರಣಗಳಲ್ಲಿ ನಕಲಿ ಆಧಾರ್‌ ಕಾರ್ಡ್‌ ಬಳಸಿ ಜಾಮೀನು ಶ್ಯೂರಿಟಿ ನೀಡಿರುವುದು ಪತ್ತೆಯಾಗಿದೆ.

ಮತ್ತೊಂದು ಪ್ರಕರಣ: ಮಂಗಳೂರು ಕಸಬಾ ಬೆಂಗ್ರೆಯ ಮೊಯಿದ್ದೀನ್‌ ನಾಸೀರ್‌ (46) ನ. 6ರಂದು ಜಾಮೀನು ಶ್ಯೂರಿಟಿ ನೀಡಿದ್ದು ಈತನ ದಾಖಲೆಗಳನ್ನು ಪರಿಶೀಲಿಸಿದಾಗ ಬೇರೆ ಬೇರೆ ಪ್ರಕರಣಗಳಲ್ಲಿ ಆರೋಪಿಗಳಾಗಿರುವ 5 ಮಂದಿಗೆ ನಕಲಿ ಆಧಾರ್‌ ಕಾರ್ಡ್‌ ಮತ್ತು ನಕಲಿ ಆರ್‌ಟಿಸಿ ಬಳಸಿ ಶ್ಯೂರಿಟಿದಾರನಾಗಿರುವುದು ಕಂಡುಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next