Advertisement

ಚಿದುಗೆ ಜಾಮೀನು?

11:57 PM Sep 04, 2019 | Sriram |

ಹೊಸದಿಲ್ಲಿ: ಐಎನ್‌ಎಕ್ಸ್‌ ಮೀಡಿಯಾ ಪ್ರಕರಣದಲ್ಲಿ ಮಾಜಿ ವಿತ್ತ ಸಚಿವ ಪಿ.ಚಿದಂಬರಂ ನಿರೀಕ್ಷಣಾ ಜಾಮೀನು ನಿರಾಕರಿಸಿದ ದಿಲ್ಲಿ ಹೈಕೋರ್ಟ್‌ ವಿರುದ್ಧ ಮೇಲ್ಮನವಿ ಸಲ್ಲಿಸಿದ ಪ್ರಕರಣದಲ್ಲಿ ಸುಪ್ರೀಂಕೋರ್ಟ್‌ ತೀರ್ಪು ನೀಡಲಿದೆ.

Advertisement

ಈ ಹಿನ್ನೆಲೆಯಲ್ಲಿ ಅವರಿಗೆ ಜಾಮೀನು ಸಿಗಲಿದೆಯೇ ಎಂಬ ಕುತೂಹಲಕ್ಕೆ ಗುರುವಾರ ತೆರೆಬೀಳಲಿದೆ. ಇದೇ ವೇಳೆ, ತನ್ನ ವಿರುದ್ಧ ಹೊರಡಿಸಲಾಗಿರುವ ಜಾಮೀನು ರಹಿತ ವಾರಂಟ್‌ ಅನ್ನು ಪ್ರಶ್ನಿಸಿ ಸಲ್ಲಿಸಿರುವ ಪ್ರಕರಣವನ್ನೂ ಸುಪ್ರೀಂಕೋರ್ಟ್‌ ನಿರ್ಧರಿಸಲಿದೆ. ಇದೇ ವೇಳೆ, 15 ದಿನಗಳ ಸಿಬಿಐ ಕಸ್ಟಡಿ ಅವಧಿ ಕೂಡ ಸೆ. 5 ರಂದು ಮುಕ್ತಾಯವಾಗಲಿದೆ.  ಇವರನ್ನು ಆ.21 ರಂದು ಬಂಧಿಸಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next