Advertisement

Bantwal: ಯುವಕನ ಕೊಲೆ ಪ್ರಕರಣ- ಇಬ್ಬರು ಆರೋಪಿಗಳಿಗೆ ಜಾಮೀನು

01:51 AM Oct 01, 2023 | Team Udayavani |

ಬಂಟ್ವಾಳ: ಚಿಕ್ಕಮಗಳೂರು ದೇವರಮನೆ ಸಮೀಪ ಗುಡ್ಡದಲ್ಲಿ ಶವವಾಗಿ ಪತ್ತೆಯಾದ ಮಂಚಿ ಮೂಲದ ಯುವಕನ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ಬಂಟ್ವಾಳದ ಇಬ್ಬರು ಆರೋಪಿಗಳಿಗೆ ರಾಜ್ಯ ಹೈಕೋರ್ಟ್‌ ಜಾಮೀನು ನೀಡಿದೆ.

Advertisement

ಆಫ್ರಿದ್‌ ಹಾಗೂ ಇಶಾದ್‌ ಜಾಮೀನು ಪಡೆದ ಆರೋಪಿಗಳು. ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಚಿಕ್ಕಮಗಳೂರು ಪೊಲೀಸರು ಒಟ್ಟು 6 ಮಂದಿ ಆರೋಪಿಗಳನ್ನು ಬಂಧಿಸಿದ್ದರು. ಪ್ರಕರಣದ ತನಿಖೆ ನಡೆಸುತ್ತಿದ್ದ ಮೂಡಿಗೆರೆ ಪೊಲೀಸ್‌ ಸರ್ಕಲ್‌ ಇನ್‌ಸ್ಪೆಕ್ಟರ್‌ ಸೋಮೇಗೌಡ ಹಾಗೂ ಬಣಕಲ್‌ ಪಿಎಸ್‌ಐ ಜಂಬೂರಾಜ್‌ ಮಹಾಜನ್‌ ಅವರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು.

ಬಣಕಲ್‌ ಠಾಣಾ ವ್ಯಾಪ್ತಿಯ ದೇವರಮನೆ ಸಮೀಪ ಜೂನ್‌ 8ರಂದು ಕೊಳೆತ ಸ್ಥಿತಿಯಲ್ಲಿ ಯುವಕನ ಮೃತದೇಹವೊಂದು ಪತ್ತೆಯಾಗಿದ್ದು, ಅದು ಮಂಚಿ ಮೂಲದ ಯುವಕ ಸವಾದ್‌ನ ಮೃತದೇಹ ಎಂದು ಗುರುತಿಸಲಾಗಿತ್ತು. ಗಾಂಜಾ ವಿಚಾರಕ್ಕೆ ಸಂಬಂಧಿಸಿ ಕೊಲೆ ನಡೆದಿದೆ ಎಂಬ ಆರೋಪ ಕೇಳಿಬಂದಿತ್ತು.

ಪ್ರಸ್ತುತ ಪ್ರಕರಣದ ಇಬ್ಬರು ಆರೋಪಿಗಳಿಗೆ ಹೈಕೋರ್ಟ್‌ ಷರತ್ತುಬದ್ಧ ಜಾಮೀನು ನೀಡಿದ್ದು, ಆರೋಪಿಗಳ ಪರ ನ್ಯಾಯವಾದಿಗಳಾದ ಆಸಿಫ್‌ ಬೈಕಾಡಿ ಹಾಗೂ ಮಹಮ್ಮದ್‌ ಅಸರ್‌ ಮುಡಿಪು ವಾದಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next