Advertisement

ಪಿಎಸ್‌ಐ ನೇಮಕಾತಿ ಹಗರಣ : ಅಮೃತ್ ಪಾಲ್ ಜಾಮೀನು ಅರ್ಜಿ ವಜಾ

09:43 PM Jul 25, 2022 | Team Udayavani |

ಬೆಂಗಳೂರು: ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಆರೋಪಿಯಾಗಿರುವ ನೇಮಕಾತಿ ಎಡಿಜಿಪಿ ಆಗಿದ್ದ ಅಮೃತ್ ಪಾಲ್ ಅವರಿಗೆ ಜಾಮೀನು ನೀಡಲು ಬೆಂಗಳೂರಿನ 1ನೇ ಎಸಿಎಂಎಂ ನ್ಯಾಯಾಲಯ ನಿರಾಕರಿಸಿದೆ.

Advertisement

ಇನ್ನೂ ಹಗರಣದ ತನಿಖೆ ನಡೆಸಲಾಗುತ್ತಿದೆ, ಅಲ್ಲಿ ಗಂಭೀರ ಆರೋಪಗಳಿವೆ. ಪಾಲ್ ನೇಮಕಾತಿ ಎಡಿಜಿಪಿ ಆಗಿದ್ದು, ಪ್ರಕರಣದಲ್ಲಿ 35ನೇ ಆರೋಪಿಯಾಗಿದ್ದಾರೆ ಎಂದು ನ್ಯಾಯಾಧೀಶ ಆನಂದ್ ಟಿ ಚೌಹಾಣ್ ಅವರು ಜಾಮೀನು ಅರ್ಜಿಯನ್ನು ವಜಾ ಮಾಡಿದರು.

ಪ್ರಕರಣದ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್, ವಕೀಲ ಪಿ. ಪ್ರಸನ್ನ ಕುಮಾರ್ ಅವರು ಐಪಿಎಸ್ ಅಧಿಕಾರಿ ಗಂಭೀರ ಅಪರಾಧ ಎಸಗಿದ್ದಾರೆ ಮತ್ತು ಹಿರಿಯ ಅಧಿಕಾರಿಯನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡುವುದು ತಪ್ಪು ಸಂಕೇತವನ್ನು ರವಾನಿಸುತ್ತದೆ ಎಂದು ವಾದಿಸಿದರು.

542 ಪಿಎಸ್‌ಐಗಳ ನೇಮಕಾತಿಯಲ್ಲಿ ಲಂಚ ಮತ್ತು ಉತ್ತರ ಪತ್ರಿಕೆಗಳನ್ನು ತಿದ್ದಿದ ಆರೋಪಗಳು ಪರೀಕ್ಷೆಗಳನ್ನು ರದ್ದುಗೊಳಿಸಲು ಕಾರಣವಾಗಿವೆ. ಈ ಪ್ರಕರಣದಲ್ಲಿ ಹಲವು ಅಭ್ಯರ್ಥಿಗಳು ಮತ್ತು ಪೊಲೀಸ್ ಅಧಿಕಾರಿಗಳನ್ನು ಬಂಧಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next