Advertisement

ಲಂಚ ಪಡೆದ ಆರೋಪ ;BJP ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಜಾಮೀನು

03:01 PM Apr 15, 2023 | Team Udayavani |

ಬೆಂಗಳೂರು: ಕೆಎಸ್ ಡಿಎಲ್ ಟೆಂಡರ್ ಗಾಗಿ ಲಂಚ ಪಡೆದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಶನಿವಾರ ಜಾಮೀನು ಮಂಜೂರು ಮಾಡಿದೆ.

Advertisement

5 ಲಕ್ಷ ಬಾಂಡ್, ಇಬ್ಬರ ಶ್ಯೂರಿಟಿ ಮೇಲೆ ಜಾಮೀನು ನೀಡಲಾಗಿದೆ. 3 ವಾರಕ್ಕೊಮ್ಮೆ ಲೋಕಾಯುಕ್ತ ಪೊಲೀಸರ ಮುಂದೆ ಹಾಜರಾಗಬೇಕು ಮತ್ತು ತನಿಖಾಧಿಕಾರಿ ವಶಕ್ಕೆ ಪಾಸ್ ಪೋರ್ಟ್ ನೀಡಬೇಕು ಎಂಬ ಷರತ್ತು ಹಾಕಲಾಗಿದೆ.

ಕರ್ನಾಟಕ ಸಾಬೂನು ಮಾರ್ಜಕ ಕಾರ್ಖಾನೆಗೆ ಭೇಟಿ ನೀಡುವಂತಿಲ್ಲ, ಸಾಕ್ಷ್ಯಾಧಾರ ನಾಶಪಡಿಸುವಂತಿಲ್ಲವೆಂದು ಎಂದು ಷರತ್ತು ಹಾಕಿ ಜಾಮೀನು ನೀಡಿ 82 ನೇ ಸಿಸಿಹೆಚ್ ಜಡ್ಜ್ ಬಿ. ಜಯಂತಕುಮಾರ್ ಆದೇಶ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next