Advertisement

ಐಪಿಎಸ್‌ ಅಧಿಕಾರಿ ಪರಂಬೀರ್‌ ಸಿಂಗ್‌ ವಿರುದ್ಧ ಶಿಸ್ತಿನ ಕ್ರಮ?

08:21 PM Nov 29, 2021 | Team Udayavani |

ಮುಂಬೈ:ಮುಂಬೈನ ನಿವೃತ್ತ ಪೊಲೀಸ್‌ ಆಯುಕ್ತ ಪರಂಬೀರ್‌ ಸಿಂಗ್‌ ಅವರನ್ನು ಸೇವೆಯಿಂದ ಸಸ್ಪೆಂಡ್‌ ಮಾಡುವ ಸಾಧ್ಯತೆ ಹೆಚ್ಚಾಗಿದೆ. ಸೇವಾ ನಿಯಮಗಳನ್ನು ಉಲ್ಲಂಘಿಸಿದ ಆರೋಪದ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರ್ಕಾರ ಅವರ ವಿರುದ್ಧ ಶಿಸ್ತಿನ ಕ್ರಮ ಕೈಗೊಳ್ಳುವ ಇರಾದೆಯಲ್ಲಿದೆ.

Advertisement

ಜೂನ್‌ನಲ್ಲಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ದೇಬಾಶಿಶ್‌ ಚಕ್ರವರ್ತಿ ನೇತೃತ್ವದಲ್ಲಿ ಐಪಿಎಸ್‌ ಅಧಿಕಾರಿ ವಿರುದ್ಧ ತನಿಖೆಗೆ ಆದೇಶ ನೀಡಿತ್ತು. ಚಕ್ರವರ್ತಿ ನೇತೃತ್ವದ ಸಮಿತಿ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಿದ್ದು, ಅದನ್ನು ಸ್ವೀಕರಿಸಿದೆ.

ವಜಾಗೊಂಡ ಪೊಲೀಸ್‌ ಅಧಿಕಾರಿ ಸಚಿನ್‌ ವಾಜೇ, ಮುಖ್ಯಮಂತ್ರಿ ಉದ್ಧವ್‌ ಠಾಕ್ರೆಗೆ ಪತ್ರ ಬರೆದು, ಗೃಹ ಸಚಿವರಾಗಿದ್ದ ಅನಿಲ್‌ ದೇಶ್‌ಮುಖ್‌ ವಿರುದ್ಧ ಆರೋಪ ಮಾಡಿದ್ದ ಆರೋಪ ಹೊರಿಸಲಾಗಿದೆ.

ಇದನ್ನೂ ಓದಿ:ಮಾಸ್ಕ್ ಧರಿಸದಿದ್ದರೆ ದಂಡ, ಜಿಲ್ಲೆಯಾದ್ಯಂತ ಮಾಸ್ಕ್ ಡ್ರೈವ್‌ : ಉಡುಪಿ ಜಿಲ್ಲಾಧಿಕಾರಿ

ವಾರಂಟ್‌ ರದ್ದು:
ಮತ್ತೊಂದೆಡೆ, ಮಾಜಿ ಸಚಿವ ಅನಿಲ್‌ ದೇಶ್‌ಮುಖ್‌ ವಿರುದ್ಧ ಆರೋಪಗಳ ವಿರುದ್ಧ ತನಿಖೆ ನಡೆಸಲು ರಚಿಸಲಾಗಿರುವ ನ್ಯಾ.ಕೈಲಾಶ್‌ ಚಂಡೀವಾಲ್‌ ನೇತೃತ್ವದ ಸಮಿತಿ ಮುಂದೆ ಪರಂಬೀರ್‌ ಸಿಂಗ್‌ ಮಾಡಿದ ಹಾಜರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಹೊರಡಿಸಲಾಗಿದ್ದ ಜಾಮೀನು ರಹಿತ ವಾರಂಟ್‌ ಅನ್ನು ರದ್ದುಗೊಳಿಸಿದೆ ಸಮಿತಿ. ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 15 ಸಾವಿರ ರೂ. ನೀಡಿದ್ದಕ್ಕೆ, ಸೂಕ್ತ ದಾಖಲೆಗಳನ್ನು ವಕೀಲರ ಮೂಲಕ ನೀಡಿದ್ದಾರೆ. ಆಯೋಗದ ಮುಂದೆ ಮಾಜಿ ಸಚಿವ ದೇಶ್‌ಮುಖ್‌ ಮಂಗಳವಾರ ಹಾಜರಾಗಲಿದ್ದಾರೆ.

Advertisement

 

Advertisement

Udayavani is now on Telegram. Click here to join our channel and stay updated with the latest news.

Next