Advertisement

Bailhongala; ವಿದ್ಯುತ್ ಸ್ಪರ್ಶಿಸಿ ತಂದೆ- ಮಗ ಸಾವು

12:24 PM Sep 01, 2023 | Team Udayavani |

ಬೆಳಗಾವಿ: ಮನೆಯ ಮುಂದಿದ್ದ ವಿದ್ಯುತ್ ಕಂಬದ ತಂತಿ ತಗುಲಿ ತಂದೆ ಮತ್ತು ಮಗ ಮೃತಪಟ್ಟ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಉಡಿಕೇರಿ ಗ್ರಾಮದಲ್ಲಿ ನಡೆದಿದೆ.

Advertisement

ಮೃತ ದುರ್ದೈವಿಗಳನ್ನು ಪ್ರಭು ಹುಂಬಿ (69) ಮತ್ತು ಪುತ್ರ ಮಂಜುನಾಥ (35) ಎಂದು ಗುರುತಿಸಲಾಗಿದೆ.

ಇದನ್ನೂ ಓದಿ:Droupadi Murmu: ನೆಹರು ಸ್ಮಾರಕ ವಸ್ತುಸಂಗ್ರಹಾಲಯದ ಮರುನಾಮಕರಣಕ್ಕೆ ರಾಷ್ಟ್ರಪತಿ ಅನುಮೋದನೆ

ಮನೆಯ ಮುಂದೆ ಬಿದ್ದಿದ್ದ ಕಸವನ್ನು ತೆಗೆಯಲು ಹೋದಾಗ ನೆಲದ ಮೇಲೆ ಬಿದ್ದಿದ್ದ ವಿದ್ಯುತ್ ತಂತಿ ತಗುಲಿದೆ. ಮೊದಲು ತಂದೆಗೆ ವಿದ್ಯುತ್ ತಂತಿ ತಗುಲಿದೆ. ಇದನ್ನು ನೋಡಿದ ಮಗ ಮಂಜುನಾಥ ಅವರು ತಂದೆಯನ್ನು ಪಾರುಮಾಡಲು ಯತ್ನಸಿದಾಗ ಅವರಿಗೂ ಸಹ ವಿದ್ಯುತ್ ತಗುಲಿ ಇಬ್ಬರೂ ಮೃತಪಟ್ಟಿದ್ದಾರೆ.

ದೊಡ್ಡವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next